ಶತ್ರುವಿನೊಂದಿಗೂ ಕರುಣೆ ತೋರಿ ಉದಾತ್ತ ಮಾದರಿಯನ್ನು ಮುಂದಿಟ್ಟ ಪ್ರವಾದಿ ಮುಹಮ್ಮದ್ (ಸ) ರವರ ನಡೆ-ನುಡಿಗಳನ್ನು ಜಗತ್ತಿನ ಮುಂದೆ ಅನಾವರಣಗೊಳಿಸುವ ಬದಲು
ತಮ್ಮ ಸಿದ್ಧಾಂತಗಳಿಗೆ ಧಾರ್ಮಿಕ ಲೇಪನ ಹಚ್ಚಿ ಸಮರ್ಥಿಸುವುದಕ್ಕಾಗಿ ಅವುಗಳನ್ನು ದುರ್ವ್ಯಾಖ್ಯಾನಗೊಳಿಸುವ ಪ್ರವೃತ್ತಿ ಖಂಡನೀಯ ಎಂದು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ತಮ್ಮ ವಿರುದ್ಧ ಖಡ್ಗವೆತ್ತಿದ್ದ ಶತ್ರುವೊಬ್ಬನು ನಿರಾಯುಧನಾದಾಗ
ಅವನ ಮೇಲೆ ಪ್ರತೀಕಾರ ತೀರಿಸಿಕೊಳ್ಳುವ ಅವಕಾಶ ಪ್ರವಾದಿಗಳಿಗಿತ್ತು. ಆದರೆ ಅವರು ಅವನನ್ನು ಕ್ಷಮಿಸಿ ಕಳುಹಿಸಿಕೊಟ್ಟರು.
ಪ್ರವಾದಿಯವರ ಉದಾತ್ತ ಜೀವನ ಸಂದೇಶಕ್ಕೆ ಮಾದರಿಯಾದ ಈ ಘಟನೆಯನ್ನು ವಿಕಲವಾಗಿ ವ್ಯಾಖ್ಯಾನಿಸಿ ಪ್ರವಾದಿಗಳು ಪ್ರತೀಕಾರ ತೀರಿಸುವಂತೆ ಪಿ ಎಫ್ ಐ ಸಂಘಟನೆಯು ಕೇರಳದಲ್ಲಿ ನಡೆಸಿದ ಸಮ್ಮೇಳನ ಒಂದರಲ್ಲಿ ಭಾಷಣ ಮಾಡಲಾಗಿದೆ. ಇದು ಸ್ಪಷ್ಟವಾದ ಪ್ರವಾದಿ ನಿಂದನೆಯಾಗಿದ್ದು, ಇಸ್ಲಾಮಿನ ಬಗ್ಗೆ
ಕೋಮುವಾದ, ಭಯೋತ್ಪಾದನೆಗಳನ್ನು ಆರೋಪಿಸುತ್ತಿರುವ ಸಂಘಪರಿವಾರಕ್ಕೆ ಅವರ ವಾದಗಳನ್ನು ಮತ್ತಷ್ಟು ಹರಡಲು
ಇಂತಹ ಹೇಳಿಕೆಗಳು
ಸರಕಾಗುತ್ತಿದೆ.
ಇದು ಅಕ್ಷಮ್ಯವಾಗಿದ್ದು, ಇಂತಹ ಹೇಳಿಕೆಗಳನ್ನು ನೀಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ಬಗ್ಗೆ ಸಮಾಜವು ಜಾಗೃತವಾಗಿರಬೇಕು ಎಂದು ಎಸ್ ವೈ ಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಜಿಎಂ ಕಾಮಿಲ್ ಸಖಾಫಿ ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?