ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ವತಿಯಿಂದ ಸೆಪ್ಟೆಂಬರ್ 29ರ ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ 08ಗಂಟೆಯಿಂದ ಮನಾಮದಲ್ಲಿರುವ ಪಾಕಿಸ್ತಾನ ಕ್ಲಬ್ ಮೈದಾನದಲ್ಲಿ ಬೃಹತ್ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಅಸ್ಸಯ್ಯಿದ್ ಅಲೀ ಬಾಫಖಿ ತಂಙಳ್ ರವರು ಆಗಮಿಸಲಿದ್ದು, ಮೌಲಾನಾ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿಯವರು ಮುಖ್ಯ ಪ್ರಬಾಷಣ ಮಾಡಲಿದ್ದಾರೆ.
ರಾಷ್ಟ್ರೀಯ, ಅಂತರ್ರಾಷ್ಟ್ರೀಯ ಸಂಘಟನಾ ನೇತಾರರು, ಉಲಮಾಗಲು, ಸಾದಾತ್ಗಳು, ಸಾಮಾಜಿಕ ಹಾಗೂ ರಾಜಕೀಯ ನೇತಾರರು ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದಾರೆ.
“ಪ್ರವಾದಿ ಮುಹಮ್ಮದ್ ಮುಸ್ತಫಾ (ﷺِ) ಮಾನವೀಯತೆಯ ಮಹಾನಾಯಕ” ಎಂಬ ಶೀರ್ಷಿಕೆಯಲ್ಲಿ ನಡೆಯಲಿರುವ ಮೀಲಾದ್ ಕ್ಯಾಂಪೈನ್ ಭಾಗವಾಗಿ ಮೌಲಿದ್ ಜಲ್ಸಾಗಳು, ಅಹ್ಲನ್ ಯಾ ರಬೀಹ್ ಕಾರ್ಯಕ್ರಮ, ಪ್ರಭಾತ ಮೌಲಿದ್, ಮಹಿಳಾ ತರಗತಿಗಳು, ಪ್ರವಾದಿ ಜೀವನ ಚರಿತ್ರೆಯ ಪುಸ್ತಕ ವಿತರಣೆ, ಸೌಹಾರ್ದ ಕೂಟ ಸೇರಿದಂತೆ ವೈವಿದ್ಯಮವಾದ ಕಾರ್ಯಕ್ರಮಗಳನ್ನು ಕೆಸಿಎಫ್ ಬಹರೈನ್ ಹಮ್ಮಿಕೊಂಡಿದ್ದು, ಈ ಕ್ಯಾಂಪೈನನ್ನು ಈಗಾಗಲೇ ನೂರುಸ್ಸಾದಾತ್ ಅಸ್ಸಯ್ಯಿದ್ ಬಾಯಾರ್ ತಂಗಳ್ ರವರು ಉದ್ಘಾಟಿಸಿದ್ದಾರೆ ಎಂದು ಕೆಸಿಎಫ್ ಬಹರೈನ್ ಮೀಲಾದ್ ಕಾನ್ಫರೆನ್ಸ್ ಸ್ವಾಗತ ಸಮಿತಿಯ ನೇತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ