ಮಂಗಳೂರು: ವಿವಿಧ ಭಾಷೆಗಳ ಒಕ್ಕೂಟ ವ್ಯವಸ್ಥೆಯಾದ ಭಾರತದಲ್ಲಿ, ವಿವಿಧ ಭಾಷಾ ವಾರು ಪ್ರಾಂತ್ಯಗಳ ಆಧಾರದಲ್ಲಿಯೇ ರಾಜ್ಯಗಳ ಸ್ಥಾಪನೆಯಾಗಿದ್ದು, ಪ್ರಸ್ತುತ ಕೇಂದ್ರ ಸರಕಾರ ರಾಜ್ಯಗಳ ಮೇಲೆ ಖಡ್ಡಾಯ ಹಿಂದಿ ಭಾಷೆ ಯನ್ನು ಹೇರುವ ಅಪ್ರಾಯೋಗಿಕ ಪ್ರಯತ್ನ ಮಾಡುತ್ತಿರುವುದನ್ನು ದ.ಕ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ.
ವಿವಿಧತೆಯಲ್ಲಿ ಏಕತೆ ಈ ನಾಡಿನ ಒಗ್ಗಟ್ಟಿನ ಜೀವಾಳ, ಕರ್ನಾಟಕದಲ್ಲಿ ಕನ್ನಡವೇ ಆಡು ಬಾಷೆ, ಇದರ ಮೇಲೆ ಕೇಂದ್ರ ಸರಕಾರ ಹಿಂದಿಯನ್ನು ಖಡ್ಡಾಯವಾಗಿ ಹೇರಿ, ಉತ್ತರ ಭಾರತೀಯತೆಯನ್ನು ನಮ್ಮ ಮೇಲೆ ಸವಾರಿ ಮಾಡುವ ಪ್ರಯತ್ನ ಸಹಿಸಲು ಅಸಾದ್ಯ.
ಕೇಂದ್ರ ಸರಕಾರವು ತನ್ನ ಹಿಂದಿ ಹೇರಿಕೆಯ ನಿಲುವಿನಿಂದ ಹಿಂದೆ ಸರಿಯದೆ ಇದ್ದಲ್ಲಿ, ಕರಾವಳಿ ಮತ್ತು ಮಲಬಾರ್ ಜಿಲ್ಲೆಗಳನ್ನು ಕೇಂದ್ರೀಕರಿಸಿ ತುಳು – ಕನ್ನಡ – ಮಲಯಾಳಂ ಸಮ್ಮಿಲನದಲ್ಲಿ ಗಡಿನಾಡ ಕನ್ನಡಿಗ ಕಯ್ಯಾರ ಕಿಂಞಣ್ಣ ರೈ ಮಾದರಿಯ ಪ್ರಾದೇಶಿಕ ಭಾಷಾ ಚಳುವಳಿ ಮಾಡಲಾಗುವುದು.
ಭಾಷಾ ಚಳುವಳಿ ಮತ್ತು ಕರ್ನಾಟಕ ಏಕೀಕರಣ ಚಳವಳಿಗೆ ನಮಗೆ ಕಯ್ಯಾರ ರೈ ಅವರೇ ಮಾದರಿ. ಕಯ್ಯಾರ ರೈ ಅವರು 1997 ರಲ್ಲಿ ಮಂಗಳೂರಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನದಲ್ಲಿ ಕನ್ನಡಿಗರಿಗೆ ನೀಡಿದ ಭಾಷಾ ಅನುಸರಣೆಯ ಮಾರ್ಗದರ್ಶನ ನಮಗೆ ಅಂತಿಮ. ಕೇಂದ್ರ ಸರಕಾರ ಅಪ್ರಾಯೋಗಿಕ ಹಿಂದಿ ಹೇರಿಕೆಯ ತನ್ನ ನಿಲುವನ್ನು ಶೀಘ್ರ ಹಿಂದಕ್ಕೆ ಪಡೆಯಬೇಕು.ಇಲ್ಲದೆ ಇದ್ದಲ್ಲಿ ಅಪ್ರಾಯೋಗಿಕ ಹಿಂದಿ ಹೇರಿಕೆಯ ವಿರುದ್ಧ ಜಿಲ್ಲೆಯಲ್ಲಿ ಸುದೃಢ ಚಳುವಳಿ ರೂಪಿಸಲಾಗುವುದು ಎಂದು ಕೆ.ಅಶ್ರಫ್ ಎಚ್ಚರಿಕೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)