ಕಣ್ಣೂರು | ವಕ್ಫ್ ವಂಚನೆ ಪ್ರಕರಣದಲ್ಲಿ ಲೀಗ್ -ಕಾಂಗ್ರೆಸ್ ಮುಖಂಡರನ್ನು ಬಂಧಿಸಲಾಗಿದೆ. ಮುಸ್ಲಿಂ ಲೀಗ್ ರಾಜ್ಯ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಕಲ್ಲಾಯಿ,ಲೀಗ್ ನಾಯಕ ಯು ಮಹ್ರೂಫ್ ಮತ್ತು ಕಾಂಗ್ರೆಸ್ ಮುಖಂಡ ಎಂಸಿ ಕುಂಞಹ್ಮದ್ ಎಂಬುವರನ್ನು ಬಂಧಿಸಲಾಗಿದೆ.
ಮಟ್ಟನೂರು ಜುಮಾ ಮಸೀದಿ ನಿರ್ಮಾಣದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ತನಿಖಾ ತಂಡವು ನಿನ್ನೆ ಅಬ್ದುರ್ರಹ್ಮಾನ್ ಕಲ್ಲಾಯಿ ಅವರನ್ನು ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿತು. ಇತರ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಮಟ್ಟನೂರು ಸಿಐಎಂ ಕೃಷ್ಣನ್ ನೇತೃತ್ವದಲ್ಲಿ ಸಿಐ ಕಚೇರಿಗೆ ಕರೆ ಮಾಡಿ ವಿಚಾರಣೆ ನಡೆಸಿದರು. ಇದರ ಬೆನ್ನಲ್ಲೇ ಬಂಧನ ನಡೆದಿದೆ. ಬಂಧನದ ಬಳಿಕ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.
ವಕ್ಫ್ ಮಂಡಳಿಯ ಅನುಮತಿ ಪಡೆಯದೇ ನಡೆಸಲಾದ ಕಾಮಗಾರಿಯಲ್ಲಿ ಕೋಟಿಗಳ ವಂಚನೆ ನಡೆಸಲಾಗಿದೆ ಎಂಬ ದೂರಿನ ಪ್ರಕಾರ ವಿಚಾರಣೆ ನಡೆಸಲಾಗಿದೆ. ಮೂರು ಕೋಟಿ ಖರ್ಚಾದ ಮಸೀದಿ ನಿರ್ಮಾಣ ಕಾಮಗಾರಿಗೆ ಹತ್ತು ಕೋಟಿ ಖರ್ಚು ಮಾಡಿರುವುದಾಗಿ ಲೆಕ್ಕದಲ್ಲಿ ತೋರಿಸಿರುವುದನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇನ್ವಾಯ್ಸ್ನಲ್ಲಿ ತೋರಿಸಿರುವ ಮೊತ್ತಕ್ಕೆ ಯಾವುದೇ ಬಿಲ್ಗಳು ಅಥವಾ ವೋಚರ್ಗಳಿಲ್ಲ. ಕಟ್ಟಡಗಳನ್ನು ಬಾಡಿಗೆಗೆ ನೀಡುವಾಗಲೂ ವಂಚನೆ ನಡೆದಿದೆ ಎನ್ನಲಾಗಿದೆ. ಮಟ್ಟನ್ನೂರು ಜಮಾಅತ್ ಸಮಿತಿಯ ಸದಸ್ಯರಾಗಿರುವ ನಿಡುವೋಟುಂಕುನ್ನ್ ಎಂ.ಪಿ.ಶಮೀರ್ ಅವರು ವಕ್ಫ್ ವಂಚನೆಯ ಬಗ್ಗೆ ದೂರು ನೀಡಿದ್ದರು.
















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ