ಕಣ್ಣೂರು | ವಕ್ಫ್ ವಂಚನೆ ಪ್ರಕರಣದಲ್ಲಿ ಲೀಗ್ -ಕಾಂಗ್ರೆಸ್ ಮುಖಂಡರನ್ನು ಬಂಧಿಸಲಾಗಿದೆ. ಮುಸ್ಲಿಂ ಲೀಗ್ ರಾಜ್ಯ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಕಲ್ಲಾಯಿ,ಲೀಗ್ ನಾಯಕ ಯು ಮಹ್ರೂಫ್ ಮತ್ತು ಕಾಂಗ್ರೆಸ್ ಮುಖಂಡ ಎಂಸಿ ಕುಂಞಹ್ಮದ್ ಎಂಬುವರನ್ನು ಬಂಧಿಸಲಾಗಿದೆ.
ಮಟ್ಟನೂರು ಜುಮಾ ಮಸೀದಿ ನಿರ್ಮಾಣದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ತನಿಖಾ ತಂಡವು ನಿನ್ನೆ ಅಬ್ದುರ್ರಹ್ಮಾನ್ ಕಲ್ಲಾಯಿ ಅವರನ್ನು ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿತು. ಇತರ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಮಟ್ಟನೂರು ಸಿಐಎಂ ಕೃಷ್ಣನ್ ನೇತೃತ್ವದಲ್ಲಿ ಸಿಐ ಕಚೇರಿಗೆ ಕರೆ ಮಾಡಿ ವಿಚಾರಣೆ ನಡೆಸಿದರು. ಇದರ ಬೆನ್ನಲ್ಲೇ ಬಂಧನ ನಡೆದಿದೆ. ಬಂಧನದ ಬಳಿಕ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.
ವಕ್ಫ್ ಮಂಡಳಿಯ ಅನುಮತಿ ಪಡೆಯದೇ ನಡೆಸಲಾದ ಕಾಮಗಾರಿಯಲ್ಲಿ ಕೋಟಿಗಳ ವಂಚನೆ ನಡೆಸಲಾಗಿದೆ ಎಂಬ ದೂರಿನ ಪ್ರಕಾರ ವಿಚಾರಣೆ ನಡೆಸಲಾಗಿದೆ. ಮೂರು ಕೋಟಿ ಖರ್ಚಾದ ಮಸೀದಿ ನಿರ್ಮಾಣ ಕಾಮಗಾರಿಗೆ ಹತ್ತು ಕೋಟಿ ಖರ್ಚು ಮಾಡಿರುವುದಾಗಿ ಲೆಕ್ಕದಲ್ಲಿ ತೋರಿಸಿರುವುದನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇನ್ವಾಯ್ಸ್ನಲ್ಲಿ ತೋರಿಸಿರುವ ಮೊತ್ತಕ್ಕೆ ಯಾವುದೇ ಬಿಲ್ಗಳು ಅಥವಾ ವೋಚರ್ಗಳಿಲ್ಲ. ಕಟ್ಟಡಗಳನ್ನು ಬಾಡಿಗೆಗೆ ನೀಡುವಾಗಲೂ ವಂಚನೆ ನಡೆದಿದೆ ಎನ್ನಲಾಗಿದೆ. ಮಟ್ಟನ್ನೂರು ಜಮಾಅತ್ ಸಮಿತಿಯ ಸದಸ್ಯರಾಗಿರುವ ನಿಡುವೋಟುಂಕುನ್ನ್ ಎಂ.ಪಿ.ಶಮೀರ್ ಅವರು ವಕ್ಫ್ ವಂಚನೆಯ ಬಗ್ಗೆ ದೂರು ನೀಡಿದ್ದರು.
















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ