ಕಣ್ಣೂರು | ವಕ್ಫ್ ವಂಚನೆ ಪ್ರಕರಣದಲ್ಲಿ ಲೀಗ್ -ಕಾಂಗ್ರೆಸ್ ಮುಖಂಡರನ್ನು ಬಂಧಿಸಲಾಗಿದೆ. ಮುಸ್ಲಿಂ ಲೀಗ್ ರಾಜ್ಯ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಕಲ್ಲಾಯಿ,ಲೀಗ್ ನಾಯಕ ಯು ಮಹ್ರೂಫ್ ಮತ್ತು ಕಾಂಗ್ರೆಸ್ ಮುಖಂಡ ಎಂಸಿ ಕುಂಞಹ್ಮದ್ ಎಂಬುವರನ್ನು ಬಂಧಿಸಲಾಗಿದೆ.
ಮಟ್ಟನೂರು ಜುಮಾ ಮಸೀದಿ ನಿರ್ಮಾಣದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ತನಿಖಾ ತಂಡವು ನಿನ್ನೆ ಅಬ್ದುರ್ರಹ್ಮಾನ್ ಕಲ್ಲಾಯಿ ಅವರನ್ನು ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿತು. ಇತರ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಮಟ್ಟನೂರು ಸಿಐಎಂ ಕೃಷ್ಣನ್ ನೇತೃತ್ವದಲ್ಲಿ ಸಿಐ ಕಚೇರಿಗೆ ಕರೆ ಮಾಡಿ ವಿಚಾರಣೆ ನಡೆಸಿದರು. ಇದರ ಬೆನ್ನಲ್ಲೇ ಬಂಧನ ನಡೆದಿದೆ. ಬಂಧನದ ಬಳಿಕ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.
ವಕ್ಫ್ ಮಂಡಳಿಯ ಅನುಮತಿ ಪಡೆಯದೇ ನಡೆಸಲಾದ ಕಾಮಗಾರಿಯಲ್ಲಿ ಕೋಟಿಗಳ ವಂಚನೆ ನಡೆಸಲಾಗಿದೆ ಎಂಬ ದೂರಿನ ಪ್ರಕಾರ ವಿಚಾರಣೆ ನಡೆಸಲಾಗಿದೆ. ಮೂರು ಕೋಟಿ ಖರ್ಚಾದ ಮಸೀದಿ ನಿರ್ಮಾಣ ಕಾಮಗಾರಿಗೆ ಹತ್ತು ಕೋಟಿ ಖರ್ಚು ಮಾಡಿರುವುದಾಗಿ ಲೆಕ್ಕದಲ್ಲಿ ತೋರಿಸಿರುವುದನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇನ್ವಾಯ್ಸ್ನಲ್ಲಿ ತೋರಿಸಿರುವ ಮೊತ್ತಕ್ಕೆ ಯಾವುದೇ ಬಿಲ್ಗಳು ಅಥವಾ ವೋಚರ್ಗಳಿಲ್ಲ. ಕಟ್ಟಡಗಳನ್ನು ಬಾಡಿಗೆಗೆ ನೀಡುವಾಗಲೂ ವಂಚನೆ ನಡೆದಿದೆ ಎನ್ನಲಾಗಿದೆ. ಮಟ್ಟನ್ನೂರು ಜಮಾಅತ್ ಸಮಿತಿಯ ಸದಸ್ಯರಾಗಿರುವ ನಿಡುವೋಟುಂಕುನ್ನ್ ಎಂ.ಪಿ.ಶಮೀರ್ ಅವರು ವಕ್ಫ್ ವಂಚನೆಯ ಬಗ್ಗೆ ದೂರು ನೀಡಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ