ದೆಹಲಿ: ಅವಿವಾಹಿತ ಮಹಿಳೆಯರಿಗೂ ಗರ್ಭಪಾತ(Abortion) ಮಾಡಿಕೊಳ್ಳಲು ಸುಪ್ರೀಂ ಕೋರ್ಟ್(Supreme Court) ಅನುಮತಿ ನೀಡಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠದಿಂದ ಈ ಆದೇಶ ಹೊರಬಿದ್ದಿದೆ.
ಪ್ರತಿಯೊಬ್ಬ ಮಹಿಳೆಗೆ ಕಾನೂನುಬದ್ಧ ಗರ್ಭಪಾತ ಮಾಡುವ ಹಕ್ಕಿದೆ. ಪತ್ನಿಯ ಒಪ್ಪಿಗೆಯಿಲ್ಲದೆ ಪತಿ ಲೈಂಗಿಕ ಕ್ರಿಯೆ ನಡೆಸುವುದನ್ನೂ ಅತ್ಯಾಚಾರ ಎಂದು ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
24 ವಾರಗಳಿಗಿಂತ ಕಡಿಮೆ ವಯಸ್ಸಿನ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ವಿವಾಹಿತ ಮತ್ತು ಅವಿವಾಹಿತ ಮಹಿಳೆಯರಿಗೆ ಸಮಾನ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವೈದ್ಯಕೀಯ ಪ್ರೆಗ್ನೆನ್ಸಿ ಆಕ್ಟ್ ಪ್ರಕಾರ ವಿವಾಹಿತ ಮಹಿಳೆಯರಿಗೆ ಮಾತ್ರ ಗರ್ಭಪಾತಕ್ಕೆ ಅವಕಾಶವಿದೆ. ವಿಕಲಾಂಗ ಮಹಿಳೆಯರಿಗೆ ಮತ್ತು ಅತ್ಯಾಚಾರದಿಂದ ಬದುಕುಳಿದವರಿಗೆ ವಿಶೇಷ ಅನುಮತಿಯೊಂದಿಗೆ ಗರ್ಭಪಾತವನ್ನು ಅನುಮತಿಸಲಾಗಿತ್ತು. ಆದರೆ ಮಹಿಳೆಯರಿಗೆ ಗರ್ಭಪಾತ ಮಾಡುವ ಹಕ್ಕಿದೆ ಮತ್ತು ವಿವಾಹಿತ ಮತ್ತು ಅವಿವಾಹಿತರ ನಡುವಿನ ವ್ಯತ್ಯಾಸವು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಂತರಾಷ್ಟ್ರೀಯ ಗರ್ಭಪಾತ ದಿನದಂದೇ ಮಹಿಳೆಯರಿಗೆ ತಮ್ಮ ಶಾರೀರಿಕ ಹಕ್ಕನ್ನು ನೀಡುವ ಮಹತ್ವದ ತೀರ್ಪು ಹೊರಬಿದ್ದಿರುವುದು ಮತ್ತೊಂದು ವಿಶೇಷ.ಇದೇ ವೇಳೆ, ಪತ್ನಿಯ ಒಪ್ಪಿಗೆಯಿಲ್ಲದೆ ಪತಿ ನಡೆಸುವ ಲೈಂಗಿಕ ಕ್ರಿಯೆ ಕೂಡ ಅಪರಾಧ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಲಿವಿಂಗ್ ಟುಗೆದರ್ ರಿಲೇಶನ್ ಶಿಪ್ ನಿಂದ ಗರ್ಭಿಣಿಯಾಗಿದ್ದ 25 ವರ್ಷದ ಮಹಿಳೆಯೊಬ್ಬರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದನ್ನು ಆಧರಿಸಿದ ಪ್ರಕರಣ ಇದಾಗಿದೆ. ಅವಿವಾಹಿತ ಮಹಿಳೆಗೆ ಗರ್ಭಪಾತಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದೆಹಲಿ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ಈ ಪ್ರಕರಣದ ಮೇಲ್ಮನವಿಯಲ್ಲಿ, ಸುಪ್ರೀಂ ಕೋರ್ಟ್ ಗರ್ಭಪಾತಕ್ಕೆ ಅವಕಾಶ ಮಾಡಿಕೊಟ್ಟಿದೆ, ಆದರೆ ಅವಿವಾಹಿತರಿಗೆ ಅನುಮತಿ ನಿರಾಕರಣೆಯನ್ನು ನಿರ್ದಿಷ್ಟವಾಗಿ ಪರಿಗಣಿಸಿ ಮಹತ್ವದ ತೀರ್ಪು ಬಂದಿದೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ