ದೆಹಲಿ: ಅವಿವಾಹಿತ ಮಹಿಳೆಯರಿಗೂ ಗರ್ಭಪಾತ(Abortion) ಮಾಡಿಕೊಳ್ಳಲು ಸುಪ್ರೀಂ ಕೋರ್ಟ್(Supreme Court) ಅನುಮತಿ ನೀಡಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠದಿಂದ ಈ ಆದೇಶ ಹೊರಬಿದ್ದಿದೆ.
ಪ್ರತಿಯೊಬ್ಬ ಮಹಿಳೆಗೆ ಕಾನೂನುಬದ್ಧ ಗರ್ಭಪಾತ ಮಾಡುವ ಹಕ್ಕಿದೆ. ಪತ್ನಿಯ ಒಪ್ಪಿಗೆಯಿಲ್ಲದೆ ಪತಿ ಲೈಂಗಿಕ ಕ್ರಿಯೆ ನಡೆಸುವುದನ್ನೂ ಅತ್ಯಾಚಾರ ಎಂದು ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
24 ವಾರಗಳಿಗಿಂತ ಕಡಿಮೆ ವಯಸ್ಸಿನ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ವಿವಾಹಿತ ಮತ್ತು ಅವಿವಾಹಿತ ಮಹಿಳೆಯರಿಗೆ ಸಮಾನ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವೈದ್ಯಕೀಯ ಪ್ರೆಗ್ನೆನ್ಸಿ ಆಕ್ಟ್ ಪ್ರಕಾರ ವಿವಾಹಿತ ಮಹಿಳೆಯರಿಗೆ ಮಾತ್ರ ಗರ್ಭಪಾತಕ್ಕೆ ಅವಕಾಶವಿದೆ. ವಿಕಲಾಂಗ ಮಹಿಳೆಯರಿಗೆ ಮತ್ತು ಅತ್ಯಾಚಾರದಿಂದ ಬದುಕುಳಿದವರಿಗೆ ವಿಶೇಷ ಅನುಮತಿಯೊಂದಿಗೆ ಗರ್ಭಪಾತವನ್ನು ಅನುಮತಿಸಲಾಗಿತ್ತು. ಆದರೆ ಮಹಿಳೆಯರಿಗೆ ಗರ್ಭಪಾತ ಮಾಡುವ ಹಕ್ಕಿದೆ ಮತ್ತು ವಿವಾಹಿತ ಮತ್ತು ಅವಿವಾಹಿತರ ನಡುವಿನ ವ್ಯತ್ಯಾಸವು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಂತರಾಷ್ಟ್ರೀಯ ಗರ್ಭಪಾತ ದಿನದಂದೇ ಮಹಿಳೆಯರಿಗೆ ತಮ್ಮ ಶಾರೀರಿಕ ಹಕ್ಕನ್ನು ನೀಡುವ ಮಹತ್ವದ ತೀರ್ಪು ಹೊರಬಿದ್ದಿರುವುದು ಮತ್ತೊಂದು ವಿಶೇಷ.ಇದೇ ವೇಳೆ, ಪತ್ನಿಯ ಒಪ್ಪಿಗೆಯಿಲ್ಲದೆ ಪತಿ ನಡೆಸುವ ಲೈಂಗಿಕ ಕ್ರಿಯೆ ಕೂಡ ಅಪರಾಧ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಲಿವಿಂಗ್ ಟುಗೆದರ್ ರಿಲೇಶನ್ ಶಿಪ್ ನಿಂದ ಗರ್ಭಿಣಿಯಾಗಿದ್ದ 25 ವರ್ಷದ ಮಹಿಳೆಯೊಬ್ಬರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದನ್ನು ಆಧರಿಸಿದ ಪ್ರಕರಣ ಇದಾಗಿದೆ. ಅವಿವಾಹಿತ ಮಹಿಳೆಗೆ ಗರ್ಭಪಾತಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದೆಹಲಿ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ಈ ಪ್ರಕರಣದ ಮೇಲ್ಮನವಿಯಲ್ಲಿ, ಸುಪ್ರೀಂ ಕೋರ್ಟ್ ಗರ್ಭಪಾತಕ್ಕೆ ಅವಕಾಶ ಮಾಡಿಕೊಟ್ಟಿದೆ, ಆದರೆ ಅವಿವಾಹಿತರಿಗೆ ಅನುಮತಿ ನಿರಾಕರಣೆಯನ್ನು ನಿರ್ದಿಷ್ಟವಾಗಿ ಪರಿಗಣಿಸಿ ಮಹತ್ವದ ತೀರ್ಪು ಬಂದಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ