ಕಿನ್ಯಾ,ಅ.8: ಕಿನ್ಯಾ ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರೂ, ಹಿರಿಯ ಸಮಾಜ ಸೇವಕರೂ, ಉಮರಾ ಮುಖಂಡರೂ ಆಗಿರುವ ಹಾಜಿ ಹುಸೈನ್ ಕುಂಞಿ ಚಾಯರವಳಚ್ಚಿಲ್(86) ಅವರು ಅಲ್ಪಕಾಲದ ವಾರ್ಧಕ್ಯ ಸಹಜ ಅನಾರೋಗ್ಯದಿಂದ ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.
ಹಲವಾರು ವರ್ಷ ಕಿನ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಇವರು ಕಿನ್ಯ ಕೇಂದ್ರ ಜುಮಾ ಮಸೀದಿಯ ಆಡಳಿತ ಸಮಿತಿಯಲ್ಲಿ ಹಲವಾರು ವರ್ಷ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯಾಚರಿಸಿದ್ದರು.ಕಾಂಗ್ರೆಸ್ ಮುಖಂಡರಾಗಿದ್ದ ಹುಸೈನ್ ಕುಂಞ ಹಾಜಿಯವರು ವಕ್ಸ್ ಬೋರ್ಡ್ ಸದಸ್ಯರಾಗಿ, ತಲಪಾಡಿ ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಹುಸೈನ್ ಹಾಜಿಯವರು ಕಿನ್ಯಾ ಗ್ರಾಮದ ಮುತ್ಸದ್ದಿ, ಹಲವಾರು ಧಾರ್ಮಿಕ, ಸಾಮಾಜಿಕ, ರಾಜಕೀಯ, ಸಂಘ, ಸಂಸ್ಥೆಗಳ ನಿರ್ದೇಶಕರೂ, ಮುಂಚೂಣಿ ನಾಯಕರೂ ಆಗಿದ್ದರು. ಇವರು ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ, ಆಸ್ಕರ್ ಪೆರ್ನಾನ್ಡಿಸ್, ಜನಾರ್ಧನ ಪೂಜಾರಿ, ಯು ಟಿ ಫರೀದ್ ರವರ ಆಪ್ತರಾಗಿದ್ದು, ಜಿಲ್ಲೆಯಲ್ಲೇ ಹೆಸರುವಾಸಿಯಾಗಿದ್ದರು.
ಕಿನ್ಯಾ ಕುರಿಯಕ್ಕಾರ್ ಮನೆತನದವರಾಗಿದ್ದ ಮೃತರು, ಕಿನ್ಯಾ ಕೇಂದ್ರ ಜುಮಾ ಮಸೀದಿಯ ಹಾಲಿ ಅಧ್ಯಕ್ಷರೂ, ಹಲವಾರು ಸಂಘ, ಸಂಸ್ಥೆಗಳ ನಿರ್ದೇಶಕರೂ ಸಮಾಜ ಸೇವಕರೂ ಆಗಿರುವ ಏಕ ಪುತ್ರ ಹಾಜಿ ಇಸ್ಮಾಯಿಲ್ ಹಾಗೂ ಆರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ