ಮಂಗಳೂರು: ಇತ್ತೀಚೆಗೆ ಕಡಬದ ಕಾಣಿಯೂರಿನಲ್ಲಿ, ಹೊಟ್ಟೆಪಾಡಿಗಾಗಿ ಜವಳಿ ವ್ಯಾಪಾರ ನಡೆಸಿ ಕುಟುಂಬವನ್ನು ಸಾಕುತ್ತಿದ್ದ ಬಡಪಾಯಿಗಳಿಗೆ ಹಲ್ಲೆ ನಡೆಸಿ ವಿಕೃತ ಮೆರೆದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಶ್ರಫ್ ಕಿನಾರ ಮಂಗಳೂರು ಆಗ್ರಹಿಸಿದ್ದಾರೆ.
ನಮ್ಮದೇ ಸರಕಾರ ಇದೆ, ಪೋಲೀಸರಿಗೆ ನಮ್ಮನ್ನು ಏನು ಮಾಡುಕ್ಕಾಗೊಲ್ಲ ಎಂಬ ಭಾವನೆ ಕೆಲವು ಪುಂಡಪೋಕರಿಗಳಿಗೆ ಇರುವಂತೆ ಗೋಚರವಾಗುತ್ತಿದೆ. ಇಲ್ಲದಿದ್ದರೆ ರಾಜಾರೋಷವಾಗಿ ಕಾನೂನು ಕೈಗೆತ್ತಿಕೊಂಡು ಇಷ್ಟೊಂದು ಧೈರ್ಯದಿಂದ ಹಲ್ಲೆ ನಡೆಸಿ ವಿಡಿಯೋ ರವಾನೆ ಮಾಡುವುದಾದರೆ ಇದು ಪೋಲೀಸ್ ಇಲಾಖೆಗೆ ಸವಾಲೆಸದಂತೆ.
ಅಲ್ಲದೆ, ಇದರಿಂದ ತಪ್ಪಿಸಿಕೊಳ್ಳಲು ಮಹಿಳೆಯರ ಮೂಲಕ ಸುಳ್ಳು ಕೇಸು ದಾಖಲಿಸಿ ಪ್ರಕರಣದ ದಿಕ್ಕು ತಪ್ಪಿಸಲು ಪ್ರಯತ್ನ ಮಾಡಿರುವುದನ್ನು ಹಿರಿಯ ಅಧಿಕಾರಿಗಳು ಸೂಕ್ತ ತನಿಕೆ ನಡೆಸಬೇಕು, ಹಲ್ಲೆ ಮಾಡಿದ ಸರ್ವರ ಮೇಲೂ ಕೇಸು ದಾಖಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ