ಮಂಗಳೂರು: ಇಲ್ಲಿನ, ಸುರತ್ಕಲ್ ಟೋಲ್(Suratkal Toll Gate) ವಿರುದ್ಧದ ಹೋರಾಟದ ಸಂದರ್ಭದಲ್ಲಿ ನಡೆದ ಪೊಲೀಸ್ ಕಾರ್ಯಾಚಣೆ ಘಟನೆಗೆ ಸಂಬಂಧಿಸಿ ಪ್ರತಿಭಾ ಕುಳಾಯಿಯ ವಿರುದ್ಧ ಶ್ಯಾಮ್ ಸುದರ್ಶನ್ ಭಟ್ ರವರು, ಲೈಂಗಿಕ ದೌರ್ಜನ್ಯ ಭಾಷೆಯಲ್ಲಿ, ಅಶ್ಲೀಲವಾಗಿ, ಅವಹೇಳನಾತ್ಮಕವಾಗಿ, ನಿಂದಿಸಿರುವುದನ್ನು ಮಾಜಿ ಮೇಯರ್, ಕೆ.ಅಶ್ರಫ್ ರವರು ಖಂಡಿಸಿದ್ದಾರೆ.
ಪ್ರತಿಭಾ ಕುಳಾಯಿರವರು ತನ್ನ ಪ್ರಜಾಸತ್ತಾತ್ಮಕ ಹೋರಾಟದ ಸಂದರ್ಭದಲ್ಲಿ ಓರ್ವ ಸ್ತ್ರೀ ಹೋರಾಟಗಾರಳಾಗಿ ಇದ್ದುಕೊಂಡು, ನ್ಯಾಯದ ಬೇಡಿಕೆ, ಪರಿಸ್ಥಿತಿಯ ಸವಾಲು, ಕಾನೂನಿಗೆ ಗೌರವ, ನೈತಿಕತೆಯ ಪರಿಪಾಲನೆ ಯೊಂದಿಗೆ ತನ್ನ ವ್ಯಕ್ತಿ ಗೌರವವನ್ನು ಸಂರಕ್ಷಿಸುವ ಪದಗಳನ್ನು ಆಡಿದ್ದಕ್ಕೆ, ಅದನ್ನೇ ದೊಡ್ಡ ಸೂಕ್ಷ್ಮ ಘಟನೆಯಾಗಿಸಿ ದ್ವಂದ ದೃಷ್ಟಿಯ ಮನಸ್ಥಿತಿಯಲ್ಲಿ ಕಂಡು, ಓರ್ವ ಸ್ತ್ರೀ ಸಹೋದರಿಯನ್ನು , ಸಾಮಾಜಿಕ ಜಾಲ ತಾಣಗಳ ಮೂಲಕ ಅಶ್ಲೀಲ ಮತ್ತು ಲೈಂಗಿಕ ದೌರ್ಜನ್ಯದ ಭಾಷೆಯಲ್ಲಿ ನಿಂದಿಸುವುದು ಅಪರಾಧ.
ಇಂತಹ ನೀಚ ಮನಸ್ಥಿತಿಯ ವ್ಯಕ್ತಿ ಪತ್ರಿಕಾ ವೃತ್ತಿಯಲ್ಲಿ ಇರುವುದು, ಸಾಮಾಜಿಕ ಸ್ವಾಸ್ಥ್ಯ ವನ್ನು ಕೆಡಿಸುವುದಕ್ಕಾಗಿದೆ. ಪತ್ರಕರ್ತರು ಸಮಾಜದ ದರ್ಪಣವಾಗಿ ವೃತ್ತಿ ಗೌರವವನ್ನು ಪಾಲಿಸುವುದರೊಂದಿಗೆ, ಸಮಾಜದಲ್ಲಿನ ಶೋಷಣೆಯ ವಿರುದ್ಧ ಹೋರಾಡುವ ಸ್ತ್ರೀವರ್ಗದ ಗೌರವವನ್ನು ಸಂರಕ್ಷಿಸುವ ಮಾತುಗಳನ್ನು ಆಡುವ ಬದಲು ಶ್ಯಾಮ್ ಸುದರ್ಶನ್ ಭಟ್, ಸ್ತ್ರೀ ಅಪಮಾನವನ್ನು ಮಾಡುವ ಮೂಲಕ, ಸ್ತ್ರೀಯರ ಬಗ್ಗೆಗಿನ ತನ್ನ ಮನಸ್ಥಿತಿಯನ್ನು ಹೊರಗೆಡಹಿರುವುದು, ಅವರ ನೈಜ ದೃಷ್ಟಿ ಏನು ಎಂದು ಬಿಂಬಿಸುತ್ತದೆ.ಇಂತಹ ವ್ಯಕ್ತಿಯಿಂದ ಸ್ತ್ರೀಪರ ಬರಹಗಳನ್ನು ನಿರೀಕ್ಷಿಸುವುದು ವ್ಯರ್ಥ.
ಸಹೋದರಿ ಪ್ರತಿಭಾ ಕುಳಾಯಿ ಅವರು ಬಲ್ಕೀಸ್ ಬಾನು ಸಂತ್ರಸ್ತೆಯ ಮತ್ತು ಈ ಹಿಂದೆ ಆಸಿಫಾ ಅತ್ಯಾಚಾರ ವಿರುದ್ಧ ನೇರ ದ್ವನಿ ಎತ್ತಿದ ಓರ್ವ ಧೀರ ಮಹಿಳೆ, ಅವರ ಅವಹೇಳನ ವಿರುದ್ಧದ ಸ್ತ್ರೀ ಶಕ್ತಿ ಹೋರಾಟಕ್ಕೆ ಮುಸ್ಲಿಮ್ ಒಕ್ಕೂಟ ಸಂಪೂರ್ಣ ಬೆಂಬಲವಿದೆ. ಸಹೋದರಿ ಕುಳಾಯಿರವರ ಅವಹೇಳನದ ಆರೋಪಿಯ ವಿರುದ್ಧ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ. ಜಿಲ್ಲೆಯಲ್ಲಿ ಮುಂದೆಂದೂ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಎಚ್ಚರಿಕೆ ನೀಡಬೇಕು ಎಂದು ಕೆ.ಅಶ್ರಫ್
(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ