ಮಂಗಳೂರು: ಅಲ್ ಮದೀನಾ ಮಂಜನಾಡಿ ಸಂಸ್ಥೆಯಲ್ಲಿ ಕಲಿಯುತ್ತಿರುವ ದಅ್ವಾ ವಿದ್ಯಾರ್ಥಿಗಳು ರಾಜ್ಯಾದ್ಯಂತ ಮಾದಕ ವ್ಯಸನಗಳ ವಿರುದ್ಧ ಸುಮಾರು ಸಾವಿರ ಕಿಲೋಮೀಟರ್ ಸಂಚರಿಸಿ ಹಾಗೂ ಪಟ್ಟಣಗಳಲ್ಲಿ, ಪ್ರಮುಖ ಕೇಂದ್ರಗಳಲ್ಲಿ ಕರಪತ್ರ ವಿತರಣೆ ಮೂಲಕ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉಸ್ತಾದರ ನಿರ್ದೇಶನದಂತೆ ನಡೆಯುವ ಈ ಅಭಿಯಾನಕ್ಕೆ ದಅವಾ ಕಾಲೇಜು ಪ್ರಾಂಶುಪಾಲರಾದ ಅಬ್ದುಲ್ ಸಲಾಂ ಅಹ್ಸನಿ ರವರ ಸಂಪೂರ್ಣ ಸಹಕಾರದೊಂದಿಗೆ ಅಲ್-ಮದೀನಾ ಕ್ಯಾಂಪಸಿನಿಂದ ಆರಂಭಗೊಂಡು ರಾಜ್ಯದ ರಾಜಧಾನಿಯಲ್ಲಿ ಈ ಯಾತ್ರೆಯು ಸಮಾಪ್ತಿ ಗೊಳ್ಳಲಿದೆ ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ.
ಸಂಸ್ಥೆಯಲ್ಲಿ ಜರುಗಿದ ಬೃಹತ್ ಹುಬ್ಬುರಸೂಲ್ ಕಾನ್ಫರೆನ್ಸ್ ಕಾರ್ಯಕ್ರಮದ ವೇದಿಕೆಯಲ್ಲಿ ಇದರ ಭಾಗವಾಗಿ ಮಾದಕ ವ್ಯಸನಗಳ ಬಗ್ಗೆ ನೌಫಲ್ ಮರ್ಝೂಖಿ ಭಾಷಣಗೈದರು, ದಅವಾ ಕಾಲೇಜು ವಿದ್ಯಾರ್ಥಿಗಳಿಂದ ಘೋಷವಾಕ್ಯ, ಅನ್ವರ್ ಮರ್ಝೂಖಿ ಮತ್ತು ತಂಡದಿಂದ ಕ್ರಾಂತಿ ಗೀತೆಯು ವೇದಿಕೆಯಲ್ಲಿ ನಡೆಯಿತು.

ಸಂಸ್ಥೆಯ ಪ್ರವೇಶ ದ್ವಾರದಲ್ಲಿ ಮಾದಕ ವ್ಯಸನ ಗಳಿಂದ ಉಂಟಾಗುವ ಪರಿಣಾಮವನ್ನು ವಿವರಿಸುವ ಸೈನ್ಸ್ ಮಾಡಲ್, ಹಾಗೂ ಬಿತ್ತಿ ಪತ್ರಗಳನ್ನು ಬರೆದು ತೂಗು ಹಾಕಿದ್ದು ಸಂದರ್ಶಕರ ಗಮನ ಸೆಳೆಯುತ್ತಿದೆ.
















ಇನ್ನಷ್ಟು ಸುದ್ದಿಗಳು
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ