ಮಂಗಳೂರು: ಇತ್ತೀಚೆಗೆ ಕಾಣಿಯೂರು ವಿನಲ್ಲಿ ಇಬ್ಬರು ವರ್ತಕರ ವಿರುದ್ಧ ಸ್ಥಳೀಯ ಸಂಘ ಪರಿವಾರದ ದುಷ್ಕರ್ಮಿ ವ್ಯಕ್ತಿಗಳು ವಿನಾ ಕಾರಣ ಮಾರಣಾಂತಿಕ ಹಲ್ಲೆಗೈದು,ಗಂಭೀರ ಗಾಯಗೊಳಿಸಿದ್ದು,ಆರೋಪಿತರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ನಾಳೆ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ದ.ಕ.ಜಿಲ್ಲೆಯಲ್ಲಿ ಭಯ ಮುಕ್ತ ವ್ಯಾಪಾರ ಸ್ವಾತಂತ್ರ್ಯ ನಿರ್ಮಾಣ ಬೇಡಿಕೆಯನ್ನು ಮುಂದಿಟ್ಟು, ದ.ಕ.ಜಿಲ್ಲಾಡಳಿತ, ಪೊಲೀಸು ಇಲಾಖೆ ಮತ್ತು ಸರಕಾರದ ಸಮಕ್ಷಮ ನಾಳೆ ಶುಕ್ರವಾರ ಅಪರಾಹ್ನ 3.00 ಘಂಟೆಗೆ ಪುತ್ತೂರಿನ ದರ್ಬೆ ವೃತ್ತದಿಂದ ಸಹಾಯಕ ಆಯುಕ್ತರ ಕಚೇರಿವರೆಗೆ ನಡೆಯುವ ಶಾಂತಿಯುತ, ಪ್ರಜಾಸತ್ತಾತ್ಮಕ ಜಾಥಾ ಮತ್ತು ಪ್ರತಿಭಟನಾ ಸಭೆಯನ್ನು ದ.ಕ.ಜಿಲ್ಲಾ ಮುಸ್ಲಿಮ್ ಯುವಜನ ಪರಿಷತ್ ಪುತ್ತೂರು ವತಿಯಿಂದ ಮತ್ತು ಸ್ಥಳೀಯ ಸಂಘಟನೆಗಳು, ಜಮಾಅತ್ ಕಮಿಟಿ ವತಿಯಿಂದ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ನೀಡಲಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ ನೀಡಲಾಗಿದೆ ಎಂದು ಕೆ.ಅಶ್ರಫ್(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ