ಸುರತ್ಕಲ್,ಅ.28: ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಬಳಿ ಇಂದಿನಿಂದ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ಗೇಟ್ ವಿರೋಧಿ ಹೋರಾಟಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆದರೆ ಇನ್ನೊಂದೆಡೆ ಟೋಲ್ಗೇಟ್ ವಿರೋಧಿ ಹೋರಾಟಗಾರರು ತಮ್ಮ ಅನಿರ್ದಿಷ್ಟಾವಧಿ ಧರಣಿ ಇದೀಗ ಆರಂಭಿಸಿದ್ದಾರೆ.

ಸುರತ್ಕಲ್ ಟೋಲ್ಗೇಟ್ ತೆರವಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಅಂತಿಮ ಪ್ರಕ್ರಿಯೆಗಳು ನಡೆಯುತ್ತಿವೆ. ಸರಕಾರವು ಅಧಿಕೃತವಾಗಿ ಗೆಜೆಟ್ ನೋಟಿಫಿಕೇಶನ್ ಹೊರಡಿಸುವವರೆಗೂ ಧರಣಿಯನ್ನು ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕುಮಾರ್ ನಿನ್ನೆ ಮನವಿ ಮಾಡಿದ್ದಾರೆ.


ಇನ್ನೊಂದೆಡೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರು ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಟೋಲ್ ಗೇಟ್ ಸಮೀಪದ 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6ರಿಂದ ನವೆಂಬರ್ 3ರ ಸಂಜೆ 6ರವರೆಗೆ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಹದಗೆಡುವ, ಸಾರ್ವಜನಿಕರ ಸುರಕ್ಷತೆ ಕಾಪಾಡುವ ಮತ್ತು ಟೋಲ್ ಗೇಟ್ನ ಭದ್ರತೆಯ ಹಿತದೃಷ್ಠಿಯಿಂದ ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಕಮಿಷನರ್ ಹೇಳಿದ್ದಾರೆ. ಆದರೆ ಪ್ರತಿಭಟನಾಕಾರರು ಈಗಾಗಲೇ 200 ಮೀಟರ್ ವ್ಯಾಪ್ತಿಯಿಂದ ಹೊರತಾದ ಪ್ರದೇಶದಲ್ಲಿ ತಮ್ಮ ಪ್ರತಿಭಟನೆಯನ್ನು ಆರಂಭಿಸುವುದಾಗಿ ಹೇಳಿದ್ದಾರೆ.
ಅದೇ ರೀತಿ ಇದೀಗ ಇಂದು ಮತ್ತೆ ಟೋಲ್ಗೇಟ್ ಬಳಿ ಹೋರಾಟಗಾರರು ನಿಷೇಧಾಜ್ಞೆ ಇರುವ ವ್ಯಾಪ್ತಿಯನ್ನು ಹೊರತುಪಡಿಸಿ ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.
ವರದಿ: ಅದ್ದಿ ಬೊಳ್ಳೂರು
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ