ಸಂಪ್ಯ: ಮಕ್ಕಳು ಎಂಬುದು ಅಲ್ಲಾಹನು ನೀಡಿದ ಮಹಾ ಸಂಪತ್ತಾಗಿರುತ್ತದೆ. ಅದೀಗ ಸಹಪಾಠಿ ಅಥವಾ ಸ್ನೇಹಿತರ ಹೆಸರಿನಲ್ಲಿ ಹಾಳಾಗುತ್ತಿದೆ. ಈ ಬಗ್ಗೆ ಪೋಷಕರು ಭಾರೀ ಜಾಗೃತೆ ವಹಿಸಬೇಕೆಂದು ಸುನ್ನೀ ಜಂ-ಇಯ್ಯತ್ತುಲ್ ಉಲಮಾ ಜಿಲ್ಲಾಧ್ಯಕ್ಷರಾದ ಮುಹಮ್ಮದಲೀ ಫೈಝಿ ಬಾಳೆಪುಣಿ ಸಲಹೆ ನೀಡಿದರು.
ಒಂಬತ್ತು ದಶಕಗಳ ಕಾಲ ನಮ್ಮ ಜಿಲ್ಲಾ ಕೇಂದ್ರವಾದ ಉಳ್ಳಾಲದಲ್ಲಿ ಸೇವೆ ಸಲ್ಲಿಸಿ ನಮ್ಮಿಂದಗಲಿದ ಶೈಖುನಾ ತಾಜುಲ್ ಉಲಮಾ ರವರ ಜೀವನ ಚರಿತ್ರೆಯನ್ನು ಚುಟುಕಾಗಿ ವಿವರಿಸಿದ ಅವರು ಸಜ್ಜನರ ಪಾದವನ್ನು ಹಿಂಬಾಲಿಸಿ ಜೀವನ ಧನ್ಯಗೊಳಿಸಲು ಕರೆ ನೀಡಿದರು. ಅವರು, ಸಂಪ್ಯ ಬ್ರಾಂಚ್ ಎಸ್.ವೈ.ಎಸ್ ಹಾಗೂ ಯೂನಿಟ್ ಎಸ್ಸೆಸ್ಸೆಫ್ ಜಂಟಿಯಾಗಿ ಆಯೋಜಿಸಿದ ತಾಜುಲ್ ಉಲಮಾ ಅನುಸ್ಮರಣೆ ಹಾಗೂ ಯೂನಿಟ್ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಎಸ್.ವೈ.ಎಸ್ ಸಂಪ್ಯ ಬ್ರಾಂಚ್ ಅಧ್ಯಕ್ಷರಾದ ಅಬ್ದುರ್ರಝಾಖ್ ವಾಗ್ಲೆ ರವರ ಸಭಾಧ್ಯಕ್ಷತೆಯಲ್ಲಿ ನಡೆದ ಸದ್ರಿ ಕಾರ್ಯಕ್ರಮವನ್ನು ಕೆ.ಸಿ.ಎಫ್. ನಾಯಕರಾದ ಅಬ್ದುರ್ರಶೀದ್ ಮದನಿಯವರು ಉದ್ಘಾಟಿಸಿ ಶುಭ ಹಾರೈಸಿದರು.
ಸಭಾ ಕಾರ್ಯಕ್ರಮದ ಮುಂಚಿತವಾಗಿ ತಾಜುಲ್ ಉಲಮಾ ಮೌಲಿದ್ ಪಾರಾಯಣವನ್ನು ಕೆ.ಸಿ.ಎಫ್. ಅಬುಧಾಬಿ ಝೋನ್ ನಾಯಕರಾದ ಮೂಸಾ ಮದನಿ ರವರ ನೇತೃತ್ವದಲ್ಲಿ ನಡೆಸಲಾಯಿತು. ಬಳಿಕ ನಡೆದ ಯೂನಿಟ್ ಕಾನ್ಫರೆನ್ಸ್ ನಲ್ಲಿ ಯೂನಿಟ್ ವ್ಯಾಪ್ತಿಯ ಸರಿಸುಮಾರು ಎಪ್ಪತ್ತರಷ್ಟು ವಿದ್ಯಾರ್ಥಿಗಳು ವಿವಿಧ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಎಸ್.ವೈ.ಎಸ್. ಪುತ್ತೂರು ಸೆಂಟರ್ ಅಧ್ಯಕ್ಷರಾದ ಅಬೂ ಶಝಾ ಅಬ್ದುರ್ರಝಾಖ್ ಖಾಸಿಮಿ ಕೂರ್ನಡ್ಕ, ಸೆಂಟರ್ ನಾಯಕರಾದ ಅಬ್ದುಲ್ ಖಾದರ್ ಮುಸ್ಲಿಯಾರ್ ಸೆಂಟ್ಯಾರು, ಎಸ್.ವೈ.ಎಸ್. ನಾಯಕರಾದ ಇಬ್ರಾಹಿಂ ವಾಗ್ಲೆ, ಅಬೂಬಕರ್ ಹಾಜಿ, ಸಿ. ಎಂ. ಅಬ್ದುಲ್ಲಾ ಮುಸ್ಲಿಯಾರ್ ಸೆಂಟ್ಯಾರು, ಎ.ಪಿ.ಅಬೂಬಕರ್, ಮುಹಮ್ಮದ್ ಮದನಿ ಕಮ್ಮಾಡಿ, ಅಬ್ದುಲ್ ಜಬ್ಬಾರ್ ವಾಗ್ಲೆ, ಯಾಸೀನ್ ಸಅದಿ ವಿಟ್ಲ, ಅಶ್ರಫ್ ಕಲ್ಲರ್ಪೆ, ಅಝೀಝ್ ಕಲ್ಲರ್ಪೆ, ಎಸ್.ಎಸ್. ಶೆರೀಫ್, ಎಸ್ಸೆಸ್ಸೆಫ್ ನಾಯಕರಾದ ಬಿ.ಕೆ. ನೌಫಲ್, ರಾಝಿಖ್ ಕಲ್ಲರ್ಪೆ, ಮುಸ್ತಫ ವಾಗ್ಲೆ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಸಾಥ್ ನೀಡಿ ಸಹಕರಿಸಿದ ಕೆ.ಸಿ.ಎಫ್ ನಾಯಕರನ್ನು ಹಾಗೂ ಬಾಳೆಪುಣಿ ಉಸ್ತಾದರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ ನೀಡಿ ಪ್ರೋತ್ಸಾಹಿಸಲಾಯಿತು.
ಎಸ್ಸೆಸ್ಸೆಫ್ ಯೂನಿಟ್ ಅಧ್ಯಕ್ಷರಾದ ಬಿ.ಕೆ. ಯಾಸೀನ್ ಅಹ್ಸನಿ ಸ್ವಾಗತಿಸಿ, ಕೊಂಬಾಳಿ ಝುಹುರಿ ವಂದಿಸಿದರು. ಅಬ್ದುಲ್ ಹಮೀದ್ (ಅಮ್ಮಿ) ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ