ಮಂಗಳೂರು,ನ.9: ಇಲ್ಲಿನ ಹೊರವಲಯದ ಅತಿ ಪುರಾಣ ಮಳಲಿ ಮಸೀದಿಯ ಕಾಮಗಾರಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ನ ಅರ್ಜಿಯನ್ನು ಮಂಗಳೂರು ನ್ಯಾಯಾಲಯ ಸ್ವೀಕರಿಸಿದೆ.
ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್, ಮಸೀದಿಯ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ತೀರ್ಪುನೀಡಿದೆ.
ಮಸೀದಿ ಕಾಮಗಾರಿ ತಡೆಯಾಜ್ಞೆಯನ್ನು ತೆರವುಗೊಳಿಸಿ, ವಿಎಚ್ ಪಿ ಅರ್ಜಿ ವಜಾಗೊಳಿಸುವಂತೆ ಮಸೀದಿ ಕಮಿಟಿ ಸಲ್ಲಿಸಿದ ಅರ್ಜಿ ಇದೀಗ ವಜಾಗೊಂಡಿದೆ.
ಈ ಕುರಿತ ಅರ್ಜಿ ವಿಚಾರಣೆ ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿ ನಡೆಯಲಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಮುಂದಿನ ವಿಚಾರಣೆ 2023 ರ ಜನವರಿ ಮೊದಲ ವಾರಕ್ಕೆ ಮುಂದೂಡಲಾಗಿದೆ.
ಸುಮಾರು 900 ವರ್ಷಗಳ ಇತಿಹಾಸವಿರುವ ಮಳಲಿ ಪೇಟೆ ಜುಮಾ ಮಸೀದಿಯನ್ನು ನವೀಕರಣಗೊಳಿಸಲು ಉದ್ದೇಶಿಸಲಾಗಿತ್ತು. ಅದರಂತೆ ಒಳಗಿನ ಮಸೀದಿಯ ಇತಿಹಾಸಕ್ಕೆ ಧಕ್ಕೆಯಾಗದಂತೆ ರಕ್ಷಿಸಿ ಹೊರಭಾಗವನ್ನು ಕೆಡವಿ ನವೀಕರಣ ಮಾಡುವುದಕ್ಕಾಗಿ ಹೊರಗಿನ ಪಾರ್ಶ್ವವನ್ನು ಕೆಡವಲಾಗಿತ್ತು.
ಈ ನಡುವೆ ಯಾರೋ ಕಿಡಿಗೇಡಿಗಳು ಒಳಗಿನ ಮಸೀದಿಯ ಚಿತ್ರವನ್ನು ದೇವಸ್ಥಾನ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹರಡಿರುವುದು ವಿವಾದಕ್ಕೆ ಕಾರಣವಾಯಿತು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)