ಮೂಡುಬಿದಿರೆ: ಅಲ್ ಮಫಾಝ್ ಮೂಡಬಿದ್ರೆ ಸಂಸ್ಥೆಯಿಂದ ಪ್ರಾಂತ್ಯ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡದ ಕಡಿತಗೊಳಿಸಿರುವ ವಿದ್ಯುತ್ ಸಂಪರ್ಕವನ್ನು ಪುನರ್ಜೋಡಿಸುವಂತೆ ಮೆಸ್ಕಾಂಗೆ ಉಚ್ಚನ್ಯಾಯಾಲಯ ಆದೇಶ ನೀಡಿದೆ.
ಪುರಸಭೆಯಿಂದ ಪರವಾನಿಗೆ ಪಡೆದು ಕಟ್ಟಡವನ್ನು ಕಟ್ಟಲಾಗಿತ್ತು,ಆ ಬಳಿಕ ಸದ್ರಿ ಕಟ್ಟಡವನ್ನು ವಾಣಿಜ್ಯ ಬಳಕೆಯ ಉದ್ದೇಶದಿಂದ ಕಾನೂನು ಪ್ರಕಾರವೇ ಪುರಸಭೆಗೆ ಮನವಿಯನ್ನು ಸಲ್ಲಿಸಲಾಗಿತ್ತು.ಆ ಸಂದರ್ಭದಲ್ಲಿ ಅಶಾಂತಿಯನ್ನು ಉಂಟು ಮಾಡುವ ಉದ್ದೇಶದಿಂದಲೇ ಕೆಲವರು ಆಕ್ಷೇಪವನ್ನು ಸಲ್ಲಿಸಿದ್ದರು. ಈ ಬಗ್ಗೆ ಪುರಸಭೆಯ ಕೌನ್ಸಿಲ್ ನಲ್ಲಿ ಮೀಟಿಂಗ್ ಹಂತದಲ್ಲಿ ಇರುವಾಗಲೇ ಒತ್ತಡಕ್ಕೆ ಮಣಿದು ಅಧಿಕಾರಿಗಳು ಅಲ್ ಮಫಾಝ್ ಗೆ ಯಾವುದೇ ಅವಕಾಶವನ್ನು ನೀಡದೇ ಕಾನೂನು ಬಾಹಿರವಾಗಿ ಕಟ್ಟಡದ ವಿದ್ಯುತ್ ಸಂಪರ್ಕ ವನ್ನುಕಡಿತ ಗೊಳಿಸಿದ್ದರು.
ವಿದ್ಯುತ್ ಕಡಿತ ಗೊಳಿಸಿದ ಬಗ್ಗೆ ಹಾಗೂ ಪರವಾನಿಗೆ ನೀಡುವ ಬಗ್ಗೆ ಪುರಸಭೆಯು ನೊಟೀಸ್ ಮಾಡಿರುವ ಬಗ್ಗೆ ಬೆಂಗಳೂರು ಮಾನ್ಯ ಉಚ್ಚನ್ಯಾಯಾಲಯದಲ್ಲಿ ದಾವೆ ಹೂಡಿದ್ದು. ಪ್ರಕರಣವನ್ನು ಗಮನಿಸಿ ಮಾನ್ಯ ಉಚ್ಚನ್ಯಾಯಾಲಯವು ಕಾನೂನು ಬಾಹಿರ ವಾಗಿ ಯಾವುದೇ ಕ್ರಮ ಜರುಗಿಸದಂತೆ ತಡೆಯಾಜ್ಞೆಯನ್ನು ನೀಡಿದೆ. ಹಾಗೂ, ಕಡಿತಗೊಳಿಸಿರುವ ವಿದ್ಯುತ್ ಸಂಪರ್ಕವನ್ನು ತಕ್ಷಣವೇ ಪುನರ್ಜೋಡಿಸುವಂತೆ ಮೆಸ್ಕಾಂಗೆ ಆದೇಶ ನೀಡಿದೆ. ಮೆಸ್ಕಾಂ ಇಲಾಖೆಯು ಉಚ್ಚನ್ಯಾಯಾಲಯದ ಆದೇಶದಂತೆ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ವನ್ನು ಪುನರ್ಜೊಡಣೆ
ಮಾಡಿರುತ್ತಾರೆ. ಕಾನೂನು ಹೋರಾಟದಲ್ಲಿ ಅಲ್ ಮಫಾಝ್ ಮೂಡಬಿದ್ರೆ ಸಂಸ್ಥೆಗೆ ಜಯವಾಗಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)