ಕುವೈಟ್ :ಕೆಸಿಎಫ್ ಸೌತ್ ಝೋನ್ ಕುವೈಟ್ ವತಿಯಿಂದ ಮುಹಿಯುದ್ದೀನ್ ರಾತೀಬ್ ಆಲಪಾನೆ
ಶೈಖ್ ಜೀಲಾನಿ (ಖ. ಸಿ )ತಾಜುಲ್ ಉಲಮಾ, ನೂರುಲ್ ಉಲಮಾ ಶೈಖುಲ್ ಹದೀಸ್ ನೆಲ್ಲಿಕುತ್ತು ಇಸ್ಮಾಯಿಲ್ ಮುಸ್ಲಿಯಾರ್ ಅನುಸ್ಮರಣೆ ಕಾರ್ಯಕ್ರಮ ದಿನಾಂಕ 11/11/2022 ಫಹಾಹೀಲ್ ಕೆಸಿಎಫ್ ಕಛೇರಿಯಲ್ಲಿ ನಡೆಯಿತು.

ಸೌತ್ ಝೋನ್ ಅಧ್ಯಕ್ಷ ಜನಾಬ್ ಎಸ್ ಎಂ ಉಮರಬ್ಬ ಕೊಳಕೆ ರವರ ಅಧ್ಯಕ್ಷತೆಯಲ್ಲಿ ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದ್ ರವರ ದುವಾ ದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿದ್ದು ಸೌತ್ ಝೋನ್ ಕಾರ್ಯದರ್ಶಿ ಜನಾಬ್ ಮುನೀರ್ ಕಾರ್ಕಳ ಸ್ವಾಗತ ಮಾಡಿ ಮುಹಿಯದ್ದೀನ್ ರಾತೀಬ್ ಆಲಪಾನೆ ಯನ್ನು ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದರ ಸಮ್ಮುಖದಲ್ಲಿ ನೆರವೇರಿತು.


ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಶಿಕ್ಷಣ ಅಧ್ಯಕ್ಷ ಬಹುಮಾನ್ಯ ಬಾದುಷಾ ಸಖಾಫಿ ಉದ್ಘಾಟನೆ ಭಾಷಣಗೈದು, ಆಶಂಸ ಭಾಷಣ ವನ್ನು ಕೆಸಿಎಫ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಯಾಕೂಬ್ ಕಾರ್ಕಳ, ಕೆಸಿಎಫ್ ನೋರ್ತ್ ಝೋನ್ ಅಧ್ಯಕ್ಷ ಜನಾಬ್ ಖಲಂದರ್ ಶಾಫಿಗೈದರು ಅದೇ ರೀತಿ ರಾಷ್ಟ್ರೀಯ ಸಮಿತಿ ಪಬ್ಲಿಕೇಶನ್ ವಿಭಾಗದ ಅಧ್ಯಕ್ಷ ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿರವರು ಮುಹಿ ಯದ್ದಿನ್ ಶೈಖ್ ರವರ ಚರಿತ್ರೆ ಬಗ್ಗೆ ಸವಿವಿವರವಾಗಿ ತಿಳಿಸಿದರು.
ಅದೇ ರೀತಿ ಕಾರ್ಯಕ್ರಮದಲ್ಲಿ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಫೈನಾನ್ಸ್ ಕಂಟ್ರೋಲರ್ ಹಾಜಿ ಮೂಸ ಇಬ್ರಾಹಿಂ, ಆಡಳಿತ ವಿಭಾಗ ಅಧ್ಯಕ್ಷ ಜನಾಬ್ ಅಬ್ಬಾಸ್ ಬಳಂಜ,ಸಾಂತ್ವನ ವಿಭಾಗದ ಅಧ್ಯಕ್ಷ ಜನಾಬ್ ಇಕ್ಬಾಲ್ ಕಂದಾವರ ಸಂಘಟನಾ ಕಾರ್ಯದರ್ಶಿ ಜನಾಬ್ ಅಹ್ಮದ್ ಸಮೀರ್ ಕೆಸಿರೋಡ್, ಪಬ್ಲಿಕೇಶನ್ ವಿಭಾಗ ಕಾರ್ಯದರ್ಶಿ ಜನಾಬ್ ಇಬ್ರಾಹಿಂ ವೇಣೂರು,ಸಾಂತ್ವನ ಕಾರ್ಯದರ್ಶಿ ಜನಾಬ್ ಅಬ್ದುಲ್ ಮಲಿಕ್ ಸೂರಿಂಜೆ,ಫಹಾಹಿಲ್ ಸೆಕ್ಟರ್ ಅಧ್ಯಕ್ಷ ಜನಾಬ್ ಇಬ್ರಾಹಿಂ ಅಡ್ಕಾರ್ ಬಾಯರ್ ಮುಜಮ್ಮು ಇದರ ಸಾರಥಿ ಜನಾಬ್ ಹೈದರ್ ಹಾಜಿ ಪಟ್ಟೋರಿ ಜಹರ ಸೆಕ್ಟರ್ ಅಧ್ಯಕ್ಷ ಜನಾಬ್ ಅಬ್ಬಾಸ್ ಪಾಳ್ಯ,ಮೆಹಬುಲ ಸೆಕ್ಟರ್ ಅಧ್ಯಕ್ಷ ಜನಾಬ್ ಸಂಶುದ್ದಿನ್ ಕುಂದಾಪುರ ಉಪಸ್ಥಿತರಿದ್ದರು.
ಕೊನೆಯಲ್ಲಿಕೆಸಿಎಫ್ INC ನಾಯಕ ಆಡಳಿತ ವಿಭಾಗದ ಕೊರ್ಡಿನೇಟರ್ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದರ ನಸೀಹತ್ ಹಾಗೂ ದುವಾ ನಡೆಸಿ ಕೊಟ್ಟರು ಕಾರ್ಯಕ್ರಮ ದಲ್ಲಿ ರಾಷ್ಟ್ರೀಯ ಸಮಿತಿಯ ನಾಯಕರು ಝೋನ್ ನಾಯಕರು ಸೆಕ್ಟರ್ ನಾಯಕರು ಉಪಸ್ಥಿತಿರಿದ್ದರು ಅದೇ ರೀತಿ ಕೊನೆಯಲ್ಲಿ ಸೌತ್ ಝೋನ್ ಸಂಘಟನಾ ಅಧ್ಯಕ್ಷ ಸಂಸುಂದ್ದಿನ್ ಬೆಜ್ಜವಳ್ಳಿ ಧನ್ಯವಾದಗೈದು ಮೂರು ಸ್ವಲಾತ್ ನೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು.
ವರದಿ: ಇಬ್ರಾಹಿಂ ವೇಣೂರು ಕುವೈಟ್
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ