ಮಂಗಳೂರು: ಆರು ವರ್ಷಗಳ ಸತತ ಹೋರಾಟದ ನಂತರ ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ. ಇದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ತ ಜನತೆಯ ಒಗ್ಗಟ್ಟಿನ ಹೋರಾಟದ ಫಲ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.
ಜನತೆಯ ಅಖಂಡ ಬೆಂಬಲದೊಂದಿಗೆ ಹೋರಾಟ ಸಮಿತಿ ಕಳೆದ ಮೂರು ತಿಂಗಳಿಂದ ನಿರ್ಣಾಯಕ ಹೋರಾಟಗಳನ್ನು ಸಂಘಟಿಸಿತ್ತು. ಅಂತಹ ದಣಿವರಿಯದ ಪ್ರಯತ್ನಗಳು ಇಂದು ಗೆಲುವಿನ ಸನಿಹಕ್ಕೆ ತಲುಪಿಸಿದೆ ಎಂದು ಅವರು ಹೇಳಿದರು.
ಹಗಲು ರಾತ್ರಿ ಧರಣಿ ನಿರತವಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಗೆ ಟೋಲ್ ಗೇಟ್ ತೆರವು ಕುರಿತು ಈವರೆಗೂ ಜಿಲ್ಲಾಡಳಿತದ ಕಡೆಯಿಂದ ಯಾವುದೆ ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತ ಮಾಹಿತಿ, ಟೋಲ್ ಗೇಟ್ ನಲ್ಲಿ ಸಂಗ್ರಹ ನಿಲ್ಲುವವರೆಗೂ ಧರಣಿ ಮುಂದುವರಿಯಲಿದೆ. ಟೋಲ್ ಸಂಗ್ರಹ ಸ್ಥಗಿತಗೊಂಡ ತರುವಾಯವಷ್ಟೆ ಧರಣಿ ಸ್ಥಗಿತಗೊಳ್ಳಲಿದೆ ಎಂದಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಪ್ರಧಾನಿ ಹಾಗೂ ಸಾರಿಗೆ ಸಚಿವರಿಗೆ ಧನ್ಯವಾದ,ಸಲ್ಲಿಸಿದ್ದಾರೆ. ಬೆಂಬಲಿಗರು ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ. ನಿಜಕ್ಕೂ ಧನ್ಯವಾದ ಸಲ್ಲಬೇಕಾಗಿರುವುದು ಹೋರಾಟದ ಬೆನ್ನೆಲುಬಾಗಿ ನಿಂತ ತುಳುನಾಡಿನ ಸಮಸ್ತ ಜನತೆ ಹಾಗೂ ಸಹಭಾಗಿ ಸಮಾನ ಮನಸ್ಕ ಸಂಘಟನೆಗಳಿಗೆ. ಅದೇ ಸಂದರ್ಭ ಸುರತ್ಕಲ್ ಟೋಲ್ ಗೇಟ್ ನಲ್ಲಿ ಆರು ವರ್ಷಗಳಿಂದ ಸತತವಾಗಿ ಸರಿಸುಮಾರು ಮುನ್ನೂರು ಕೋಟಿ ರೂಪಾಯಿ ನಿಯಮಕ್ಕೆ ವಿರುದ್ದವಾಗಿ ಸಂಗ್ರಹಿಸಲಾಗಿದೆ. ಸಂಸದರು, ಶಾಸಕರುಗಳು ಟೋಲ್ ತೆರವಿನ ದೀರ್ಘ ವಿಳಂಬಕ್ಕಾಗಿ ತುಳುನಾಡಿನ ಜನತೆಯ ಮುಂದೆ ಈಸಂದರ್ಭ ಕನಿಷ್ಟ ವಿಷಾಧವನ್ನಾದರು ವ್ಯಕ್ತಪಡಿಸಬೇಕು ಎಂದು ಹೋರಾಟ ಸಮಿತಿ ಆಗ್ರಹಿಸುತ್ತದೆ ಎಂದು ಮುನೀರ್ ಕಾಟಿಪಳ್ಳ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್