ಮಂಜನಾಡಿ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಹಮ್ಮಿಕೊಂಡ ಉಸ್ವತುನ್ನಬಿ ಅಕಾಡೆಮಿಕ್ ಸೆಮಿನಾರ್ ಅಲ್ ಮದೀನಾದ ದಅವಾ ಕಾಲೇಜು ಲೈಬ್ರರಿ ಹಾಲ್ ನಲ್ಲಿ ನಡೆಯಿತು. “ಅಂತ್ಯಪ್ರವಾದಿ: ಬದುಕು ಮತ್ತು ಬಳುವಳಿಗಳು” ಎಂಬ ವಿಷಯದ ಕುರಿತು ರಾಷ್ಟ್ರದ ವಿವಿಧೆಡೆಯಿಂದ ಬಂದ ಹತ್ತು ಆಯ್ದ ಸಂಶೋಧಕರು ಪ್ರಬಂಧ ಮಂಡಿಸಿದರು.
ಪ್ರವಾದಿಯವರ ಆದರ್ಶಗಳು, ನಾಯಕತ್ವ ಗುಣಗಳು, ರಾಜತಾಂತ್ರಿಕ ನಡವಳಿಕೆಗಳು ಮುಂತಾದ ವಿಷಯಗಳತ್ತ ಬೆಳಕು ಹರಿಸುವ ಪ್ರಬಂಧಗಳನ್ನು ಮಂಡಿಸಿ ಚರ್ಚೆಗಳನ್ನು ಕೈಗೊಳ್ಳಲಾಯಿತು. ಪ್ರಬಂಧ ಮಂಡಿಸಲು ಆಯ್ಕೆಯಾದ ಸಂಶೋಧಕರನ್ನು ಶಾಸಕರಾದ ಯು ಟಿ ಖಾದರ್ ರವರು ಅನುಮೋದಿಸಿದರು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮವನ್ನು ಅಲ್ ಮದೀನಾ ಮ್ಯಾನೇಜಿಂಗ್ ಡೈರೆಕ್ಟರ್ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಮತ್ತು ರಾಜ್ಯ ದಅವಾ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂದಿರಾ ಗಾಂಧಿ ನ್ಯಾಷನಲ್ ಟ್ರೈಬಲ್ ವಿವಿ ಫೆಲೋ ರಾಶಿದ್ ನೂರಾನಿಯವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಅಲ್ ಮದೀನಾ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮುಹಮ್ಮದ್ ಕುಂಜಿ ಅಮ್ಜದಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಎಸ್ಸೆಸ್ಸೆಫ್ ದಅವಾ ಕನ್ವೀನರ್ ಖುಬೈಬ್ ತಂಗಳ್,ಅಲ್ ಮದೀನಾ ಪ್ರಾಧ್ಯಾಪಕರುಗಳಾದ ಅಬೂಸ್ವಾಲಿಹ್ ಅಝ್ಹರಿ, ಅಬ್ದುರಹ್ಮಾನ್ ಮರ್ಝುಖಿ ವಳಾಲು, ಅನ್ಸಾರ್ ಮಾಸ್ಟರ್ ಫಜೀರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಾಜ್ಯ ದಅವಾ ಸಿಂಡಿಕೇಟ್ ಸದಸ್ಯ ನಝೀರ್ ಅಬ್ಬಾಸ್ ಸುರೈಜಿ ಸ್ವಾಗತಿಸಿ ಹಸನ್ ಮುಈನ್ ನೂರಾನಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)