ಮಂಗಳೂರು: ಡಿಸೆಂಬರ್ 9,10 ರಂದು ಕಾವಲಕಟ್ಟೆಯಲ್ಲಿ ನಡೆಯುವ ಬೃಹತ್ ಉಲಮಾ ಕಾನ್ಫರೆನ್ಸ್ ಪ್ರಚಾರಾರ್ಥ ಮಂಗಳೂರು ಝೋನ್ ಸಮಾವೇಶವು ಪಡೀಲ್ ನಲ್ಲಿರುವ ಇಲ್ಮ್ ಸೆಂಟರ್ ಸಭಾಂಗಣದಲ್ಲಿ ಇಂದು ಮಂಗಳೂರು ಝೋನ್ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಬಶೀರ್ ಮದನಿ ಅಲ್ ಕಾಮಿಲ್ ಕೂಳೂರು ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹಿರಿಯ ವಿದ್ವಾಂಸರು ಜಂಇಯ್ಯತುಲ್ ಉಲಮಾ ರಾಜ್ಯ ನಾಯಕರೂ ಆದ ಬಹು ಹೈದರ್ ಮದನಿ ಉಸ್ತಾದ್ ಕರಾಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಹಿರಿಯ ವಿದ್ವಾಂಸ ಬಹು ಮುಹಮ್ಮದ್ ಶರೀಫ್ ಮುಸ್ಲಿಯಾರ್ ಕೃಷ್ಣಾಪುರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೋಶಾಧಿಕಾರಿ ಅಬ್ದುಲ್ ಸತ್ತಾರ್ ಸಖಾಫಿ ಅಡ್ಯಾರ್ ಪದವು ಉಲಮಾ ಕಾನ್ಫರೆನ್ಸ್ ನ ಆರ್ಥಿಕ ವ್ಯವಸ್ಥೆ ಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮ ದಲ್ಲಿ ಜಂಇಯ್ಯತುಲ್ ಮುಅಲ್ಲಿಮೀನ್ ಜೆಪ್ಪು ರೇಂಜ್ ಅಧ್ಯಕ್ಷ ಬಶೀರ್ ಅಹ್ಸನಿ ಪಡೀಲ್ ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಮುಸ್ಲಿಯಾರ್ ಕುಕ್ಕಾಜೆ ಮಂಗಳೂರು ರೇಂಜ್ ಅಧ್ಯಕ್ಷ ಅಬ್ದುಲ್ ಅಝೀಝ್ ನೂರಾನಿ ಮುರ,ಝೋನ್ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಸಅದಿ ಕಂಕನಾಡಿ,ಬುಖಾರಿ ಮದನಿ ಅಡ್ಯಾರ್ ಪದವು ಮತ್ತಿತರರು ಉಪಸ್ಥಿತರಿದ್ದರು. ಜಂಇಯ್ಯತುಲ್ ಮಂಗಳೂರು ಝೋನ್ ಪ್ರಧಾನ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸಅದಿ ನಾವೂರು ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ