ಮಂಗಳೂರು: ಇತ್ತೀಚೆಗೆ ಕರ್ನಾಟಕ ರಾಜ್ಯಾದ್ಯಂತ, ರಾಜಕೀಯವಾಗಿ ಮತ್ತು ಆಡಳಿತಾತ್ಮಕವಾಗಿ ಸಂಚಲನವನ್ನೇ ಸೃಷ್ಟಿಸಿದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ತಾಣಗಳಲ್ಲಿ ಧ್ವನಿ ಸಂದೇಶವೊಂದು ಹರಿದಾಡುತ್ತಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಗ್ರಹಿಸಿದ್ದಾರೆ.
ಇಡೀ ರಾಜ್ಯದಲ್ಲಿಯೇ ಕಾನೂನು ಸುವ್ಯವಸ್ಥೆಯ ವ್ಯತ್ಯಯ, ಮತೀಯ ದ್ರುವೀಕರಣ, ನಿರ್ಧಿಷ್ಟ ರಾಜಕೀಯ ಪಕ್ಷದ ನಾಯಕರ ಬಂಧನಗಳಿಗೆ ಕಾರಣವಾದ ಸುಳ್ಯದ ಪ್ರವೀಣ್ ನೆಟ್ಟಾರುವಿನ ಹತ್ಯೆ ಪ್ರಕರಣಕ್ಕೆ ಸಂಭಂದಿಸಿದ ಮಹತ್ವದ ಸುಳಿವು ಎಂಬ ರೀತಿಯಲ್ಲಿ ಜಾಲ ತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಸದ್ರಿ ಧ್ವನಿ ಸುರುಳಿಯಲ್ಲಿನ ಮಾಹಿತಿ ಪ್ರಕಾರ ಪ್ರವೀಣ್ ನೆಟ್ಟಾರುವಿನ ಹತ್ಯೆಯ ರೂವಾರಿಗಳು ಜಿಲ್ಲೆಯ ಪ್ರಮುಖ ರಾಜಕೀಯ ಪ್ರತಿನಿಧಿಗಳು ಎಂದು ನಂಬುವ ರೀತಿಯಲ್ಲಿದೆ.
ಸದ್ರಿ ಘಟನೆಯಿಂದಾಗಿ ಅಂದು ಜಿಲ್ಲೆ ಮತ್ತು ರಾಜ್ಯಕ್ಕೆ ಪರೋಕ್ಷವಾಗಿ ಆದ ನಷ್ಟ ಸಾಧಾರಣದ್ದಲ್ಲ. ಈ ಹತ್ಯೆಗೆ ಪ್ರತಿಯಾಗಿ ಭಿನ್ನ ಧರ್ಮದ ಯುವಕನೋರ್ವನನ್ನು ಹತ್ಯೆ ಮಾಡಲಾಗಿದೆ. ಪರಿಹಾರ ಹಂಚುವುದರಿಂದ ಹಿಡಿದು ಹೇಳಿಕೆ ನೀಡುವ ಹಂತದವರೆಗೂ ಸರಕಾರ ಧಾರ್ಮಿಕ ತಾರತಮ್ಯ ಪ್ರದರ್ಶಿಸಿದೆ. ಒಂದೊಮ್ಮೆ ಈ ಘಟನೆ ಸರಕಾರಿ ಪ್ರಾಯೋಜಿತ ಕೃತ್ಯ ಆಗಿರುವ ದೃಢವಾದ ಸಂಶಯವೂ ಎದ್ದು ಕಾಣುತ್ತಿದೆ.
ಆದುದರಿಂದ ಪ್ರಸ್ತುತ ವ್ಯಾಪಕ ವೈರಲ್ ಆಗುತ್ತಿರುವ ದ್ವನಿ ಸಂದೇಶದ ಸತ್ಯಾ ಸತ್ಯತೆಯನ್ನು ಉನ್ನತಮಟ್ಟದ ಪೊಲೀಸು ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಸಬೇಕಾಗುತ್ತದೆ. ಸಾರ್ವಜನಿಕರಿಗೆ ಇಂತಹ ಗೊಂದಲಕಾರಿ ಬೆಳವಣಿಗೆಗಳ ಬಗ್ಗೆ ತೀವ್ರ ಕಳವಳ ಸೃಷ್ಟಿಯಾಗಿದೆ. ಪೊಲೀಸು ಇಲಾಖೆ ತಮ್ಮ ಕರ್ತವ್ಯದ ಪ್ರಾಮುಖ್ಯತೆಯನ್ನು ಆರಿತು ಧ್ವನಿ ಸಂದೇಶದ ಹಿಂದಿನ ವಾಸ್ತವ ಸತ್ಯವನ್ನು ಉನ್ನತ ಮಟ್ಟದ ನ್ಯಾಯಾಧೀಶರ ಉಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ