ಮಂಗಳೂರು: ಇತ್ತೀಚೆಗೆ ಕರ್ನಾಟಕ ರಾಜ್ಯಾದ್ಯಂತ, ರಾಜಕೀಯವಾಗಿ ಮತ್ತು ಆಡಳಿತಾತ್ಮಕವಾಗಿ ಸಂಚಲನವನ್ನೇ ಸೃಷ್ಟಿಸಿದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ತಾಣಗಳಲ್ಲಿ ಧ್ವನಿ ಸಂದೇಶವೊಂದು ಹರಿದಾಡುತ್ತಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಗ್ರಹಿಸಿದ್ದಾರೆ.
ಇಡೀ ರಾಜ್ಯದಲ್ಲಿಯೇ ಕಾನೂನು ಸುವ್ಯವಸ್ಥೆಯ ವ್ಯತ್ಯಯ, ಮತೀಯ ದ್ರುವೀಕರಣ, ನಿರ್ಧಿಷ್ಟ ರಾಜಕೀಯ ಪಕ್ಷದ ನಾಯಕರ ಬಂಧನಗಳಿಗೆ ಕಾರಣವಾದ ಸುಳ್ಯದ ಪ್ರವೀಣ್ ನೆಟ್ಟಾರುವಿನ ಹತ್ಯೆ ಪ್ರಕರಣಕ್ಕೆ ಸಂಭಂದಿಸಿದ ಮಹತ್ವದ ಸುಳಿವು ಎಂಬ ರೀತಿಯಲ್ಲಿ ಜಾಲ ತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಸದ್ರಿ ಧ್ವನಿ ಸುರುಳಿಯಲ್ಲಿನ ಮಾಹಿತಿ ಪ್ರಕಾರ ಪ್ರವೀಣ್ ನೆಟ್ಟಾರುವಿನ ಹತ್ಯೆಯ ರೂವಾರಿಗಳು ಜಿಲ್ಲೆಯ ಪ್ರಮುಖ ರಾಜಕೀಯ ಪ್ರತಿನಿಧಿಗಳು ಎಂದು ನಂಬುವ ರೀತಿಯಲ್ಲಿದೆ.
ಸದ್ರಿ ಘಟನೆಯಿಂದಾಗಿ ಅಂದು ಜಿಲ್ಲೆ ಮತ್ತು ರಾಜ್ಯಕ್ಕೆ ಪರೋಕ್ಷವಾಗಿ ಆದ ನಷ್ಟ ಸಾಧಾರಣದ್ದಲ್ಲ. ಈ ಹತ್ಯೆಗೆ ಪ್ರತಿಯಾಗಿ ಭಿನ್ನ ಧರ್ಮದ ಯುವಕನೋರ್ವನನ್ನು ಹತ್ಯೆ ಮಾಡಲಾಗಿದೆ. ಪರಿಹಾರ ಹಂಚುವುದರಿಂದ ಹಿಡಿದು ಹೇಳಿಕೆ ನೀಡುವ ಹಂತದವರೆಗೂ ಸರಕಾರ ಧಾರ್ಮಿಕ ತಾರತಮ್ಯ ಪ್ರದರ್ಶಿಸಿದೆ. ಒಂದೊಮ್ಮೆ ಈ ಘಟನೆ ಸರಕಾರಿ ಪ್ರಾಯೋಜಿತ ಕೃತ್ಯ ಆಗಿರುವ ದೃಢವಾದ ಸಂಶಯವೂ ಎದ್ದು ಕಾಣುತ್ತಿದೆ.
ಆದುದರಿಂದ ಪ್ರಸ್ತುತ ವ್ಯಾಪಕ ವೈರಲ್ ಆಗುತ್ತಿರುವ ದ್ವನಿ ಸಂದೇಶದ ಸತ್ಯಾ ಸತ್ಯತೆಯನ್ನು ಉನ್ನತಮಟ್ಟದ ಪೊಲೀಸು ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಸಬೇಕಾಗುತ್ತದೆ. ಸಾರ್ವಜನಿಕರಿಗೆ ಇಂತಹ ಗೊಂದಲಕಾರಿ ಬೆಳವಣಿಗೆಗಳ ಬಗ್ಗೆ ತೀವ್ರ ಕಳವಳ ಸೃಷ್ಟಿಯಾಗಿದೆ. ಪೊಲೀಸು ಇಲಾಖೆ ತಮ್ಮ ಕರ್ತವ್ಯದ ಪ್ರಾಮುಖ್ಯತೆಯನ್ನು ಆರಿತು ಧ್ವನಿ ಸಂದೇಶದ ಹಿಂದಿನ ವಾಸ್ತವ ಸತ್ಯವನ್ನು ಉನ್ನತ ಮಟ್ಟದ ನ್ಯಾಯಾಧೀಶರ ಉಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ