janadhvani

Kannada Online News Paper

ಸುರತ್ಕಲ್‌ನಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ- ಚೂರಿ ಇರಿದು ಅಂಗಡಿ ಮಾಲೀಕನ ಹತ್ಯೆ

ಫಾಝಿಲ್ ಹತ್ಯೆಯ ಬಳಿಕ ಶಾಂತವಾಗಿದ್ದ ಸುರತ್ಕಲ್‌ನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದಾರೆ

ಸುರತ್ಕಲ್: ವ್ಯಕ್ತಿಯೋರ್ವರಿಗೆ ಚೂರಿ ಇರಿದು ಪರಾರಿಯಾಗಿರುವ ಘಟನೆ ಶನಿವಾರ(ಡಿ.24) ಸಂಜೆ ಸುರತ್ಕಲ್(Suratkal) ಸಮೀಪದ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿ ಎಂಬಲ್ಲಿ ನಡೆದಿದೆ. ಚೂರಿ ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಜಲೀಲ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಫಾಝಿಲ್ ಹತ್ಯೆಯ ಬಳಿಕ ಶಾಂತವಾಗಿದ್ದ ಸುರತ್ಕಲ್‌ನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದಾರೆ.’ಲತೀಫಾ ಸ್ಟೋರ್’ ಎಂಬ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರು, ಅಂಗಡಿಯಲ್ಲಿದ್ದ ವೇಳೆ ಅವರ ಎದೆಯ ಭಾಗಕ್ಕೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಳೆದ ಕೆಲ ತಿಂಗಳುಗಳ ಹಿಂದೆ ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನೊಬ್ಬನನ್ನು ಸಂಜೆ ವೇಳೆಗೆ ಅಂಗಡಿಯೊಂದರ ಮುಂಭಾಗದಲ್ಲೇ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡವು ಹತ್ಯೆ ಮಾಡಿತ್ತು. ಇಂದು ಅದೇ ರೀತಿಯಲ್ಲಿ ಜಲೀಲ್ ಗೂ ಚೂರಿ ಇರಿತವಾಗಿದ್ದು, ಅಂಗಡಿಯೊಂದರ ಮುಂಭಾಗದಲ್ಲೇ ಕೃತ್ಯ ನಡೆದಿದೆ.

ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !! Not allowed copy content from janadhvani.com