ಒಮಾನ್:(ಜನಧ್ವನಿ ವಾರ್ತೆ) ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ಇದರ ಆಶ್ರಯದಲ್ಲಿ ಕೆಸಿಎಫ್ ಸದಸ್ಯರಿಗೆ ಇನ್ಸ್ಫಿರಾ-2018 ಕಾರ್ಯಗಾರವು ಅಲ್ ಫವಾನ್ ಬರ್ಕಾದಲ್ಲಿ ಕೆಸಿಎಫ್ ಒಮನ್ ಗೌರವಾಧ್ಯಕರಾದ ಉಮರ್ ಸಖಾಫಿ ಮಿತ್ತೂರು ಇವರುಗಳ ದುಆದೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ಅಧ್ಯಕ್ಷರಾದ ಸಯ್ಯದ್ ಆಬಿದ್ ಅಲ್ ಹೈದ್ರೋಸ್ ತಂಙಳ್ ರವರು ಅಧ್ಯಕ್ಷತೆ ವಹಿಸಿದರು.
ಮಹಮ್ಮದಲಿ ಬರ್ಕಾ ಕಿರಾಅತ್ ಪಠಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕೆಸಿಎಫ್ ಉರ್ದು ವಿಂಗ್ ಸಂಚಾಲಕ ಶಾಕಿರ್ ಮೌಲಾನ ಅವರು ನೆರವೇರಿಸಿದರು. ನಂತರ ಕಾರ್ಯಗಾರದಲ್ಲಿ ಕರ್ನಾಟಕ ಯಾತ್ರೆಯ ರುವಾರಿ ಉಮರ್ ಸಖಾಫಿ ಎಡಪ್ಪಾಲ ಕೊಡಗು ಅವರುಗಳು ಉತ್ತಮ ಸಮಾಜಕ್ಕೆ ಮಾರ್ಗದರ್ಶಕವಾಗಿ ಕೆಸಿಎಫ್ ನ ಯುವ ಸಮೂಹವು ಮುನ್ನೇರಬೇಕು, ಹಾಗೂ ಇನ್ನಿತರ ಧಾರ್ಮಿಕ, ಭೌದ್ದಿಕ ವಿಷಯಗಳ ಬಗ್ಗೆ ಉತ್ತಮ ರೀತಿಯಲ್ಲಿ ಕಾರ್ಯಗಾರ ನಡೆಸಿಕೊಟ್ಟರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಇಸ್ಮಾಯೀಲ್ ಸಖಾಫಿ ಐಸಿಎಫ್ ಬರ್ಕಾ ಸೆಂಟರ್, ಜಮಾಲುದ್ದೀನ್ ಲತೀಫಿ ಸಂಚಾಲಕ ಐಸಿಎಫ್ ಬರ್ಕಾ, ವೈಟೀಮ್ ಚಯೆರ್ಮೆನ್ ಇಕ್ಬಾಲ್ ಬೊಲ್ಮಾರ್ ಬರ್ಕ, ಕೆಸಿಎಫ್ ಒಮಾನ್ ಕೋಶಾಧಿಕಾರಿ ಕಾಸಿಂ ಹಾಜಿ ನಿಝ್ವ ಹಾಗೂ ವಿವಿಧ ವಿಂಗ್ ಗಳ ಅಧ್ಯಕ್ಷರು ಗಳು, ಝೋನ್ ನಾಯಕರುಗಳು ಉಪಸ್ಥಿತರಿದ್ದರು.
ಇನ್ಸ್ಫಿರಾ ಕಾರ್ಯಕ್ರಮದ ಚೀಫ್ ಅಮೀರ್ ಕೆಸಿಎಫ್ ಒಮನ್ ಸಂಘಟನಾಧ್ಯಕ್ಷರಾದ ಹಂಝ ಕನ್ನಂಗಾರ್ ಇವರು ಪ್ರಾಸ್ಥಾವಿಕ ಭಾಷಣ ಮಾಡಿದರು.
ಕೆಸಿಎಫ್ ಒಮನ್ ಪ್ರಧಾನ ಕಾರ್ಯದರ್ಶಿ ಹನೀಫ್ ಸಅದಿ ಸ್ವಾಗತಿಸಿ, ಕಾರ್ಯಕ್ರಮವನ್ನು ಸಂಘಟನಾ ಕಾರ್ಯದರ್ಶಿ ಖಲಂದರ್ ಭಾವ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ