ಬೆಳ್ತಂಗಡಿ: ಬೆಳ್ತಂಗಡಿಯ ಗರ್ಡಾಡಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ‘ನಂಡೆ ಪೆಂಙಳ್’ ಎಂಬ ವಿಶೇಷ ಅಭಿಯಾನದ ಮೂಲಕ ನೂರಾರು ಬಡ ಹೆಣ್ಣುಮಕ್ಕಳ ವಿವಾಹಕ್ಕೆ ನೆರವಾಗಿದ್ದ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಕೊನೆಯುಸಿರೆಳೆದಿದ್ದಾರೆ.
ಭಾನುವಾರ ಬೆಳಗ್ಗೆ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ಖಾಸಗಿ ಬಸ್ ಹಾಗೂ ನೌಶಾದ್ ಹಾಜಿ ಸೂರಲ್ಪಾಡಿ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಸಾವಿರಾರು ಜನರ ಕಷ್ಟಗಳಿಗೆ ನೆರಳಾಗಿದ್ದ ನೌಶಾದ್ ಹಾಜಿ ಸೂರಲ್ಪಾಡಿ, ಉತ್ತರ ಕರ್ನಾಟಕ ಭಾಗದ ದೀನಿ ಚಟುವಟಿಕೆಗೆ ಸಹಾಯ ಹಸ್ತ ಚಾಚಿದ್ದರು. ಶಾಂತ ಸ್ವಭಾವದ ನಗುಮುಖದ ವ್ಯಕ್ತಿತ್ವ ಹೊಂದಿದ್ದರು.
ನೌಶಾದ್ ಹಾಜಿಯವರು ಸೂರಲ್ಪಾಡಿ ನಿವಾಸಿಯಾಗಿದ್ದು, ದ.ಕ. ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ನ ನೂತನ ಅಧ್ಯಕ್ಷರಾಗಿದ್ದು, ವಿವಿಧ ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು. ಸಮುದಾಯದ ಬಡವರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಅವರು ಬಡ ಕುಟುಂಬಗಳ ಏಳಿಗೆಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದರು.
ಇನ್ನೂ ಅಪಘಾತದಲ್ಲಿ ಮೃತಪಟ್ಟ ಮತ್ತೋರ್ವರನ್ನು ನೌಶಾದ್ ಹಾಜಿ ಸೂರಲ್ಪಾಡಿ ಅವರ ಕಾರು ಚಾಲಕ ಮುಷರಫ್ ಎಂದು ಗುರುತಿಸಲಾಗಿದೆ. ಅವರು ಉಳಾಯಿಬೆಟ್ಟು ನಿವಾಸಿಯಾಗಿದ್ದಾರೆ.
ಮೂಡುಬಿದಿರೆ ಕಾಶಿಪಟ್ಣದ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾರ್ಯದರ್ಶಿಯಾಗಿ, ಗುರುಪುರ ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ವಿವಿಧ ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಇವರು ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ