ಮಂಗಳೂರು: ಇತ್ತೀಚೆಗೆ ನಳಿನ್ ಕುಮಾರ್ ಕಟೀಲ್ ರವರು ರಸ್ತೆ ಗುಂಡಿ, ಚರಂಡಿ, ಅಭಿವೃಧ್ದಿ, ನಿರುದ್ಯೋಗದ ಬಗ್ಗೆ ಜನರು ಪ್ರಶ್ನಿಸಬೇಡಿ, ಲವ್ ಜಿಹಾದ್ ಬಗ್ಗೆ ಗಮನ ಹರಿಸಿ ಎಂದು ಕರೆ ಕೊಟ್ಟಿದ್ದು, ಇದಕ್ಕೆ ಪೂರಕವಾಗಿ ಸುಬ್ರಮಣ್ಯದಲ್ಲಿ ಅಫೀದ್ ಎಂಬ ಯುವಕನಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುತ್ತಾರೆ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಡುಗಿಯೊಂದಿಗೆ ಮಾತನಾಡಿರುವ ಕಾರಣಕ್ಕೆ ಹುಡುಗನಿಗೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಪೊಲೀಸರು ಸಂಘ ಪರಿವಾರದ ಹಲ್ಲೆ ಕೋರರ ಮತ್ತು ಹುಡುಗನ ವಿರುದ್ಧ ಪ್ರಕರಣ ದಾಖಲಿಸಿದ ಬಗ್ಗೆ ಮಾಹಿತಿ ಲಭಿಸಿದೆ.
ಅಂದು ಬೊಮ್ಮಾಯಿಯವರು ಕ್ರಿಯೆಗೆ ಪ್ರತಿಕ್ರಿಯೆ ಎಂದು ಹೇಳಿಕೆ ನೀಡಿದ್ದರಿಂದ ಇಂತಹಾ ಪ್ರಕರಣಗಳು ಮರುಕಳಿಸುತ್ತಿದೆ. ಕಾನೂನು ಕ್ರಮ ಸುದೃಢ ಗೊಳಿಸುವ ನಿರ್ಧಾರ ಕೈಗೊಂಡಿದ್ದರೆ ಇಂದು ದ.ಕ.ಜಿಲ್ಲೆಯಲ್ಲಿ ಪರಿಸ್ಥಿತಿ ಬೇರೆಯೇ ಇರುತ್ತಿತ್ತು.
ನಳಿನ್ ಕುಮಾರ್ ಕಟೀಲು ಬಿಜೆಪಿ ಯ ರಾಜ್ಯಾಧ್ಯಕ್ಷರು ಬೇರೆಯೇ ಹೇಳಿಕೆ ನೀಡಿ ಲವ್ ಜಿಹಾದ್ ಹಲ್ಲೆಗಳನ್ನು ಪ್ರಚೋದಿಸುವ ಪ್ರಯತ್ನ ಮಾಡಲಾಗಿದ್ದು, ಜನರನ್ನು ಪ್ರಕರಣಗಳಲ್ಲಿ ಸಿಲುಕಿಸಿ ಜೀವನ ಪರ್ಯಂತ ಪೊಲೀಸು ಠಾಣೆ , ಕೋರ್ಟ್, ಕಚೇರಿ ಅಲೆಯುವ ಭಾಗ್ಯವನ್ನು ಪ್ರಾಪ್ತಿಸಿದ್ದಾರೆ.
ಲವ್ ಜಿಹಾದ್ ಹಲ್ಲೆಗಳನ್ನು ಪ್ರಚೋದಿಸುವ ಬದಲು ಸರಕಾರ, ನಾರಿ ರಕ್ಷಕ ಪಡೆ ಎಂದು ಇಲಾಖೆ ತೆರೆದು ಪರವಾನಿಗೆ ಪ್ರದಾನಿಸಿದರೆ ಪೊಲೀಸು, ಕೋರ್ಟು ಕಚೇರಿ ಎಂದು ಜನರು ಜೀವನ ಹಾಳು ಮಾಡುವ ಕಾರ್ಯವಾದರೂ ತಪ್ಪುತ್ತದೆ.ಬಿ.ಜೆ.ಪಿ ಯ ರಾಜ್ಯಾಧ್ಯಕ್ಷರು ಅದನ್ನಾದರೂ ಮಾಡಲಿ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ