ಮಂಗಳೂರು: ಮುಸ್ಲಿಮ್ ಹೊರತಾದ ಭಾರತ ಸಂವಿಧಾನ ರಚಿಸುತ್ತೇವೆ, ಈ ದೇಶದ ಮುಸ್ಲಿಮರಿಗೆ ಸರಕಾರಿ ಸವಲತ್ತನ್ನು ನಿರಾಕರಿಸುವ ಆಡಳಿತ ವ್ಯವಸ್ಥೆಯನ್ನೂ ಸೃಷ್ಟಿಸುತ್ತೇವೆ ,ಎಂಬಿತ್ಯಾದಿಯಾಗಿ ವಿ.ಎಚ್.ಪಿ ನಾಯಕ ಪ್ರವೀಣ್ ತೊಗಾಡಿಯಾ ರವರು ತಮ್ಮ ಭಾಷಣದಲ್ಲಿ ಹೇಳಿಕೆ ನೀಡಿರುವುದು ಹಾಸ್ಯಾಸ್ಪದ ಮತ್ತು ಇಂತಹ ಹೇಳಿಕೆ ನಿರ್ಲಕ್ಷ್ಯಕ್ಕೆ ಅರ್ಹವಾಗಿದೆ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತದಂತಹ ಪ್ರಾಚೀನ ಪರಂಪರೆಯುಳ್ಳ ಭೌಗೋಳಿಕ, ನಿಸರ್ಗ ವ್ಯವಸ್ಥೆಯಲ್ಲಿ ಕೊಡು ಕೊಳ್ಳುವಿಕೆ ರಕ್ತ ಸಹಜ.ಇಂತಹಾ ಜನ ಸಹಕಾರ ವ್ಯವಸ್ಥೆಯಲ್ಲಿ ಧರ್ಮಾನುಯಾಯಿ ಸಮುದಾಯ ಹೊರತಾದ ಸಂವಿಧಾನ ವ್ಯವಸ್ಥೆ ಸೃಷ್ಟಿಸುವುದು ಅಪ್ರಾಯೋಗಿಕ ಎಂದು ಪ್ರವೀಣ್ ತೊಗಾಡಿಯಾರ ಅನುಯಾಯಿಗಳು ಅರಿಯುವುದು ಒಳಿತು.
ಪ್ರವೀಣ್ ತೊಗಾಡಿಯಾ ಅನುಯಾಯಿಗಳು ಅಂತಹ ಕನಸು ಕಾಣುವುದನ್ನು ಈಗಲೇ ತ್ಯಜಿಸುವುದು ಅಷ್ಟೇ ಒಳಿತು. ಭಾರತ ನೆಲೆ ಹೊಂದಿರುವುದೇ ಶಾಸನಗಳ ಚರಿತ್ರೆಯಿಂದ ಎಂದು ಇತಿಹಾಸವೇ ಹೇಳುತ್ತದೆ. ಭಾರತ ಉಪಖಂಡದ ಅಷ್ಟೂ ಶಾಸನಗಳು ಧರ್ಮಾಧಾರಿತ ವಾಗಿದೆ ಮತ್ತು ಧರ್ಮಕ್ಕೆ ಆತಿಥ್ಯ ನೀಡಿದ ಹೊರತಾದ ಒಂದೇ ಒಂದು ಶಾಸನವೂ ಈ ದೇಶದಲ್ಲಿ ಲಭ್ಯವಿಲ್ಲ ಎಂಬುದನ್ನು ತೊಗಾಡಿಯಾ ಅನುಯಾಯಿಗಳು ಅರಿಯುವುದು ಒಳಿತು ಎಂದು ಕೆ.ಅಶ್ರಫ್(ಮಾಜಿ ಮೇಯರ್)ಅಧ್ಯಕ್ಷರು,ದ.ಕ.ಮುಸ್ಲಿಮ್ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)