ದೋಹಾ,ಜ 13 : ಕರ್ನಾಟಕ ಕಲ್ಚರಲ್ ಫೌಂಡೇಶನ್ ಖತ್ತರ್ ರಾಷ್ಟ್ರೀಯ ಸಮಿತಿ ವತಿಯಿಂದ ಇಲ್ಲಿನ IICC ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂತರ್ರಾಷ್ಟ್ರೀಯ ಮಟ್ಟದ ಸ್ವಾಲಿಹಾ ಮಹಿಳಾ ತರಗತಿಯ ಉದ್ಘಾಟನಾ ಸಮಾರಂಭ ನಡೆಯಿತು.
ಕಾರ್ಯಕ್ರಮವನ್ನು ಐ.ಸಿ.ಎಫ್ ಪ್ರಧಾನ ಕಾರ್ಯದರ್ಶಿ ಡಾ.ಬಶೀರ್ ಪುತ್ತುಪ್ಪಾಡಂ ಉದ್ಘಾಟಿಸುತ್ತಾ, ಪ್ರಸಕ್ತ ಸನ್ನಿವೇಶಗಳು ಸಮಸ್ಯೆಯ ಸುಳಿಯಲ್ಲಿದ್ದು,ದಾರಿ ತಪ್ಪಲಿರುವ ನೂರೊಂದು ಮಾರ್ಗಗಳಿದೆ. ಕುಟುಂಬವನ್ನು ಸರಿದಾರಿಗೆ ತರಲು ಸಾಧ್ಯವಿರುವವರು ಗೃಹಿಣಿ ಅಥವಾ ತಾಯಂದಿರಾಗಿದ್ದಾರೆ. ಹೆಣ್ಣಿನಿಂದ ಕುಟುಂಬ ಸಬಲೀಕರಣ ಸಾಧ್ಯವೆಂದು ಅಭಿಪ್ರಾಯಪಟ್ಚರು.
ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಮಲಪ್ಪುರಂ ಜಿಲ್ಲಾ ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಕೂಟಂಬಾರ ಅಬ್ದುರ್ರಹ್ಮಾನ್ ದಾರಿಮಿ ಅಂತರ್ರಾಷ್ಟ್ರೀಯ ಮಟ್ಚದ ಸ್ವಾಲಿಹಾ ಮಹಿಳಾ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರಿಗೆ ಇಸ್ಲಾಂ ನೀಡಿದ ಸ್ಥಾನಮಾನಗಳು ಅಭೂತಪೂರ್ವವಾಗಿದ್ದು ಅದನ್ನು ಅರ್ಥೈಸುವಲ್ಲಿ ಕೆಲವರು ಎಡವುತ್ತಿದ್ದಾರೆ.ಹೆಣ್ಣೆಂದರೆ ಹೆಂಡತಿ ಮಾತ್ರವಲ್ಲ,ಅವಳೊಂದು ಸಹೋದರಿ, ಮಾತೆ, ಗೃಹಿಣಿ ಎಂಬುವುದನ್ನು ಮನವರಿಕೆ ಮಾಡಬೇಕಾಗಿದೆ ಎಂದರಲ್ಲದೆ ಹೆಣ್ಣಿಗೆ ಧಾರ್ಮಿಕ ತರಗತಿ ನೀಡುವುದರ ಪ್ರಾಮುಖ್ಯತೆ ಹಾಗೂ ಅದರ ಪ್ರಯೋಜನಗಳ ಬಗ್ಗೆ ಕುರ್ ಆನ್ ಹಾಗೂ ಹದೀಸ್ ವ್ಯಾಖ್ಯಾನ ದೊಂದಿಗೆ ಸವಿಸ್ತಾರವಾಗಿ ವಿವರಿಸಿದರು.

ಸ್ವಾಲಿಹ ಕೋರ್ಸ್ ನ ಕತೃ G.M ಕಾಮಿಲ್ ಸಖಾಫಿ , K.C.F ಅಂತರ್ರಾಷ್ಟ್ರೀಯ ಸಮಿತಿಅಧ್ಯಕ್ಷರಾದ D.P ಯೂಸುಫ್ ಸಖಾಫಿ ಬೈತಾರ್, ಕಾರ್ಯದರ್ಶಿ, P.M.H ಅಬ್ದುಲ್ ಹಮೀದ್ ಈಶ್ವರಮಂಗಲ,INC ಶಿಕ್ಷಣ ವಿಭಾಗದ ಅಧ್ಯಕ್ಷರಾದ ಹಮೀದ್ ಸಅದಿ ಈಶ್ವರಮಂಗಳ, ಅಲಿ ಮುಸ್ಲಿಯಾರ್ ಬಹರೈನ್ ಹಾಗೂ ವಿವಿಧ ರಾಷ್ಟ್ರಗಳ K.C.F ನೇತಾರರು ಆನ್ಲೈನ್ ಉಪಸ್ಥಿತಿಯಲ್ಲಿದ್ದರು.
ಇದೇ ಸಂದರ್ಭ KCF ಖತ್ತರ್ ರಾಷ್ಟ್ರೀಯ ಸಮಿತಿ ಪ್ರತಿಭೋತ್ಸವದ ಪೋಸ್ಟರ್ ಬಿಡುಗಡೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆ ಯಲ್ಲಿ ಮಹಿಳೆಯರು ಭಾಗವಹಿಸಿದ್ದರು.
ಕೆ.ಸಿ.ಎಫ್ ಖತ್ತರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹನೀಫ್ ಪಾತೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಹ್ ರೂಫ್ ಸುಲ್ತಾನಿ ನಿರೂಪಿಸಿದರು.ಶಿಕ್ಷಣ ವಿಭಾಗ ಕಾರ್ಯದರ್ಶಿ ಸಿದ್ದೀಕ್ ಹಂಡುಗುಳಿ ಸ್ವಾಗತಿಸಿ, ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಫಾರೂಕ್ ಕೃಷ್ಣಾಪುರ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ