ಮಂಗಳೂರು : ಸುನ್ನೀ ಮೆನೇಜ್ ಮೆಂಟ್ ಅಸೋಸಿಯೇಷನ್ ರಾಜ್ಯ ಸಮಿತಿಯ ವತಿಯಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ರೀಜಿನಲ್ ಗೊಳಪಟ್ಟ ಹೊಸಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿದ ನೂತನ ಮದ್ರಸ ಕಟ್ಟಡಕ್ಕೆ ಖಾಝಿ ಖುರ್ರತುಸ್ಸಾದಾತ್ ಸಯ್ಯಿದ್ ಕೂರ ತಂಙ್ಙಳ್ ರವರಿಂದ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಎಂ.ಎ ರಾಜ್ಯಾಧ್ಯಕ್ಷರಾದ ಉಜಿರೆ ಸಯ್ಯಿದ್ ಇಸ್ಮಾಯೀಲ್ ಅಲ್-ಹಾದೀ ತಂಙ್ಙಳ್ ಮದನಿಯವರು ವಹಿಸಿದ್ದರು. ಕರ್ನಾಟಕ ಸರ್ಕಾರದ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಎನ್.ಕೆ.ಎಂ.ಶಾಫೀ ಸಅದಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಜೆಪ್ಪು ಅಬ್ದುರ್ರಹ್ಮಾನ್ ಮದನಿಯವರು ಪ್ರಾಸ್ತಾವಿಕ ಭಾಷಣ ಮಾಡಿದರು. ರಾಜ್ಯ ಕ್ಷೇಮ ಕಾರ್ಯ ವಿಭಾಗದ ಕಾರ್ಯದರ್ಶಿ ಮೂಡಡ್ಕ ಅಶ್ರಫ್ ಸಖಾಫಿ ಮುಖ್ಯ ಪ್ರಭಾಷಣ ನಡೆಸಿದರು.

ಎಸ್.ಎಂ.ಎ. ರಾಜ್ಯ ಕೋಶಾಧಿಕಾರಿ ಕೊಡುಂಗಾಯಿ ಅಬ್ದುಲ್ ಹಮೀದ್ ಹಾಜಿ, ಶಿವಮೊಗ್ಗ ಜಿಲ್ಲಾಧ್ಯಕ್ಷ ಕಡ್ತೂರು ಇಬ್ರಾಹೀಂ ಹಾಜಿ ಶುಭಾಶಂಸಗೈದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಬಿ.ಎಂ. ಸಾದಿಕ್ ಮಲೆಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಸಯ್ಯಿದ್ ಭಾಷಾ ತಂಙ್ಙಳ್ ಸಾಗರ, ರಾಜ್ಯ ಕ್ಷೇಮ ಕಾರ್ಯ ವಿಭಾಗದ ಅಧ್ಯಕ್ಷ ಎ.ಕೆ.ಅಹ್ಮದ್, ಟ್ರೈನಿಂಗ್ ವಿಭಾಗದ ಅಧ್ಯಕ್ಷ ಬೆಜ್ಜವಳ್ಳಿ ಹನೀಫ್, ಪಬ್ಲಿಕ್ ರಿಲೇಷನ್ ಕಾರ್ಯದರ್ಶಿ ಪಿ.ಎಂ.ಮುಹಮ್ಮದ್ ಮದನಿ ಪೂಡಲ್, ಎಸ್.ಎಂ.ಎ. ದ.ಕ. ವೆಸ್ಟ್ ಜಿಲ್ಲಾಧ್ಯಕ್ಷ ಅಡ್ಯಾರ್ ಪದವು ಇಸ್ಮಾಯೀಲ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಎಸ್.ಎಂ.ಎ. ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಮುಸ್ಲಿಯಾರ್ ಸ್ವಾಗತಿಸಿ ಕೊನೆಯಲ್ಲಿ ತೀರ್ಥಹಳ್ಳಿ ರೀಜಿನಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಶೀದ್ ಮದನಿ ಕಡ್ತೂರು ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)