ನವದೆಹಲಿ: ಯುಎಇಯ ರಾಜಮನೆತನದ ಕಚೇರಿ ಅಧಿಕಾರಿಯಂತೆ ನಟಿಸಿ ದೆಹಲಿಯ ಲೀಲಾ ಪ್ಯಾಲೇಸ್ ಪಂಚತಾರಾ ಹೋಟೆಲ್ನಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ವಾಸವಿದ್ದು, ಬಳಿಕ ಹೊಟೇಲ್ ಬಿಲ್ ನೀಡದೇ ಪರಾರಿಯಾಗಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬಂಧಿಸಿದ್ದಾರೆ, ಆರೋಪಿಯನ್ನು 41 ವರ್ಷ ಪ್ರಾಯದ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ.
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಹೊಟೇಲ್ಗೆ ಆಗಮಿಸಿದ ಈತ ನವಂಬರ್ ಅಂತ್ಯದವರೆಗೂ ಅಲ್ಲೇ ಇದ್ದ. ಇದಾದ ನಂತರ ನವಂಬರ್ನಲ್ಲಿ ಅಲ್ಲಿ ರೂಮ್ ಖಾಲಿ ಮಾಡಿದ ಆರೋಪಿ ಈ ವೇಳೆ 20 ಲಕ್ಷ ಬಿಲ್ಗೆ ಚೆಕ್ ನೀಡಿದ್ದ. ಆದರೆ, ಚೆಕ್ ಬೌನ್ಸ್ ಆಗಿದೆ ಎಂದು ತಿಳಿದು ಬಂದಿದೆ.ಹೋಟೆಲ್ಗೆ ನಂಬಿಸಲು ಆರಂಭದಲ್ಲಿ ಮಹಮ್ಮದ್ ಶರೀಫ್ 1.5 ಲಕ್ಷ ಹಣ ಪಾವತಿಸಿದ್ದ. ಆದರೆ, ಬಾಕಿ 23 ಲಕ್ಷ ಪಾವತಿಸದೇ ಪರಾರಿಯಾಗಿದ್ದ.
ಈ ಘಟನೆಯ ನಂತರ ಹೊಟೇಲ್ ಮ್ಯಾನೇಜರ್ ಅನುಪಮ ದಾಸ್ ಗುಪ್ತಾ ಅವರು ಜನವರಿ 14 ರಂದು ದೆಹಲಿಯ ಸರೋಜಿನಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನಾಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.ಮಹಮ್ಮದ್ ಶರೀಫ್ ಯುಎಇ ಸುಲ್ತಾನ್ ಶೈಖ್ ಫಲ್ಹಾ ಬಿನ್ ಝಾಯಿದ್ ಆಲ್ ನಹ್ಯಾನ್ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಬಳಿಕ ಈತನ ಬಂಧನಕ್ಕೆ ಬಲೆ ಬೀಸಿದ ದೆಹಲಿ ಪೊಲೀಸರು ತಂಡವೊಂದನ್ನು ರಚಿಸಿ ಕಾರ್ಯಾಚರಣೆಗೆ ಇಳಿದಿದ್ದರು. ನಂತರ ಜನವರಿ 19 ರಂದು ಶರೀಫ್ನನ್ನು (Mahamed Sharif) ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೆಹಲಿ ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ