ನವದೆಹಲಿ, ಜ.23: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸಲು ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಇಂದು ಹೇಳಿದೆ.
ಹಿಜಾಬ್ ನಿಷೇಧದಿಂದಾಗಿ ಅನೇಕ ಹುಡುಗಿಯರು ಶಿಕ್ಷಣ ಸಂಸ್ಥೆಗಳನ್ನು ತೊರೆದಿದ್ದಾರೆ ಎಂದು ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ನ್ಯಾಯಾಲಯಕ್ಕೆ ತಿಳಿಸಿದರು. ಫೆಬ್ರವರಿ 6, 2023 ರಿಂದ ಹೆಣ್ಣು ಮಕ್ಕಳು ಪ್ರಾಯೋಗಿಕ ಪರೀಕ್ಷೆಗಳನ್ನು ಹೊಂದಿದ್ದಾರೆ. ಹೀಗಾಗಿ ಹಿಜಾಬ್ ವಿಷಯವನ್ನು ಮಧ್ಯಂತರ ನಿರ್ದೇಶನಗಳಿಗಾಗಿ ಪಟ್ಟಿ ಮಾಡಬೇಕಾಗಿದೆ.
ಪ್ರಾಯೋಗಿಕ ಪರೀಕ್ಷೆಗಳು ಹಿಜಾಬ್ ನಿಷೇಧವಿರುವ ಸರ್ಕಾರಿ ಶಾಲೆಗಳಲ್ಲಿ ನಡೆಯಲಿವೆ. ಇದು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಲು ಅಡ್ಡಿಯಾಗಲಿದೆ. ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಹಿಜಾಬ್ ಕುರಿತು ಮಧ್ಯಂತರ ಆದೇಶದ ಅಗತ್ಯವಿದೆ ಎಂದು ಕೆಲವು ವಿದ್ಯಾರ್ಥಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಆಗ್ರಹಿಸಿದರು.
ಮೀನಾಕ್ಷಿ ಅರೋರಾ ಅವರ ವಾದವನ್ನು ಆಲಿಸಿರುವ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ವಿ ರಾಮಸುಬ್ರಮಣಿಯನ್ ಮತ್ತು ಜೆಬಿ ಪಾರ್ದಿವಾಲಾ ಅವರನ್ನೊಳಗೊಂಡ ಪೀಠವು ಹಿಜಾಬ್ ವಿಚಾರಣೆ ನಡೆಸಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸಲು ಪರಿಗಣಿಸುವುದಾಗಿ ಹೇಳಿದೆ.
ಸುಪ್ರೀಂಕೋರ್ಟ್ನ ಇಬ್ಬರು ನ್ಯಾಯಾಧೀಶರ ಪೀಠವು ಕಳೆದ ವರ್ಷ ಅಕ್ಟೋಬರ್ 13 ರಂದು ಹಿಜಾಬ್ ವಿವಾದದಲ್ಲಿ ವಿರುದ್ಧ ತೀರ್ಪುಗಳನ್ನು ನೀಡಿತ್ತು.ಸಮುದಾಯಕ್ಕೆ ತನ್ನ ಧಾರ್ಮಿಕ ಸಂಕೇತಗಳನ್ನು ಶಾಲೆಗಳಲ್ಲಿ ಧರಿಸಲು ಅನುಮತಿ ನೀಡುವುದು ಜಾತ್ಯತೀತತೆಗೆ ವಿರೋಧವಾಗಿದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದರು, ಆದರೆ ನ್ಯಾಯಮೂರ್ತಿ ಧುಲಿಯಾ ಅವರು ಮುಸ್ಲಿಂ ಹಿಜಾಬ್ ಧರಿಸುವುದು ಕೇವಲ ಆಯ್ಕೆಯ ವಿಷಯವಾಗಿರಬೇಕು ಎಂದು ಹೇಳಿದ್ದರು.
ವಿಭಿನ್ನ ತೀರ್ಪಿನ ಹಿನ್ನೆಲೆಯಲ್ಲಿ ಹಿಜಾಬ್ ವಿಷಯದ ಇತ್ಯರ್ಥಕ್ಕೆ ತ್ರಿಸದಸ್ಯ ಪೀಠ ಸ್ಥಾಪನೆಗೆ ಸುಪ್ರೀಂ ಮುಂದಾಗಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ