ಮಂಗಳೂರು :ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ , ಮಾಧ್ಯಮ, ನಾಲ್ಕನೇ ಸ್ಥಾನದಲ್ಲಿ ತನ್ನ ಕರ್ತವ್ಯ ವನ್ನು ಸಾಧಿಸಲು ಸರಕಾರ ಮುಕ್ತ ಅವಕಾಶ ನೀಡಬೇಕಾಗುತ್ತದೆ. ಆದರೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಪ್ರಸಾರ ಮಾಡಿದ ಕಾರಣಕ್ಕಾಗಿ ಚಾನೆಲ್ ನ ಸ್ಟ್ರೀಮಿಂಗ್ ನಿಷೇಧಿಸಿರುವುದನ್ನು ಮುಸ್ಲಿಮ್ ಒಕ್ಕೂಟ ಖಂಡಿಸಿದೆ.
ನಿನ್ನೆಯ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಾರ್ತಾಭಾರತಿಯ ಸಾಮಾಜಿಕ ಜಾಲತಾಣ ಯೂಟ್ಯೂಬ್ ಚಾನೆಲ್ ಪ್ರಸಾರ ಮಾಡಿತ್ತು. ಈ ಕಾರಣಕ್ಕೆ ಮತ್ತು ಕಾಪಿರೈಟ್ ನೆಪ ಹೇಳಿ, ಯೂಟ್ಯೂಬ್ ಚಾನೆಲ್ ಸ್ಟ್ರೀಮಿಂಗ್ ಅನ್ನು ಒಂದು ವಾರದ ಅವಧಿಗೆ ನಿಷೇಧ ಮಾಡಿದೆ.
ಇದು ಮಾದ್ಯಮ ಸ್ವಾತಂತ್ರ್ಯದ ಸಂಪೂರ್ಣ ಹರಣವಾಗಿದೆ. ಇದು ಖಂಡನೀಯ. ಸರಕಾರ ತಕ್ಷಣ ಮಧ್ಯ ಪ್ರವೇಶಿಸಿ ಯೂಟ್ಯೂಬ್ ಚಾನೆಲ್ ಅನ್ನು ಸಾರ್ವಜನಿಕ ಮುಕ್ತ ವೀಕ್ಷಣೆಗೆ ಅನುಮತಿಸಬೇಕಿದೆ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್(ಮಾಜಿ ಮೇಯರ್) ಆಗ್ರಹಿಸಿದ್ದಾರೆ.
ವಾರ್ತಾಭಾರತಿಯ ವಿವರಣೆ
ಯೂಟ್ಯೂಬ್ ಗುರುವಾರ ಒಂದು ವಾರದ ನಿರ್ಬಂಧ ವಿಧಿಸಿದೆ. ಆದರೆ ಅದಕ್ಕೆ ಯೂಟ್ಯೂಬ್ ನೀಡಿರುವ ಕಾರಣ ಮಾತ್ರ ಬಹಳ ವಿಚಿತ್ರವಾಗಿದೆ. ವಾರ್ತಾಭಾರತಿಯ ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರವಾದ ದಿಲ್ಲಿಯ ಕರ್ತವ್ಯ ಪಥ್ ನಲ್ಲಿ ನಡೆದ ದೇಶದ 74ನೇ ಗಣರಾಜ್ಯೋತ್ಸವ ಪರೇಡ್ ನ ನೇರಪ್ರಸಾರದಲ್ಲಿ ಕಾಪಿರೈಟ್ ಇರುವ ವಿಷಯಗಳು ಪ್ರಸಾರವಾಗಿವೆ. ಅದಕ್ಕಾಗಿ ಆ ನೇರಪ್ರಸಾರದ ವೀಡಿಯೊ ತೆಗೆದು ಹಾಕಿ, ಚಾನಲ್ ಮೇಲೆ 7 ದಿನಗಳ ನಿರ್ಬಂಧ ವಿಧಿಸಲಾಗಿದೆ ಎಂದು ಯೂಟ್ಯೂಬ್ ಹೇಳಿದೆ.
ಈ ಬಗ್ಗೆ ಯೂಟ್ಯೂಬ್ ಗೆ ಮಾಹಿತಿ ನೀಡಿರುವ ವಾರ್ತಾಭಾರತಿ, ತಮ್ಮ ಚಾನಲ್ ನಲ್ಲಿ ಪ್ರಧಾನ ಮಂತ್ರಿಯವರ ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರವಾದ ಗಣರಾಜ್ಯೋತ್ಸವ ಪರೇಡ್ ನ ನೇರಪ್ರಸಾರವನ್ನೇ ಕೊಟ್ಟಿದ್ದು ಯಾವುದೇ ಕಾಪಿರೈಟ್ ಇರುವ ವೀಡಿಯೊ ಅಥವಾ ಸಂಗೀತವನ್ನು ಬಳಸಿಲ್ಲ ಎಂದು ಹೇಳಿದೆ. ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬದ ಪ್ರಯುಕ್ತ ದೇಶದ ರಾಜಧಾನಿಯಲ್ಲಿ ಭಾರತ ಸರಕಾರದಿಂದ ನಡೆಯುವ ಕಾರ್ಯಕ್ರಮದ ನೇರ ಪ್ರಸಾರ ನೀಡಲು ಮಾಧ್ಯಮ ಸಂಸ್ಥೆಗಳಿಗೆ ಅವಕಾಶವಿದೆ. ಅದರಲ್ಲಿ ಯಾವುದೇ ಕಾಪಿರೈಟ್ ಉಲ್ಲಂಘನೆ ಆಗುವುದಿಲ್ಲ ಎಂದು ವಿವರಣೆ ನೀಡಿದೆ. ಆದರೆ ವಾರ್ತಾಭಾರತಿಯ ಈ ವಿವರಣೆಯನ್ನು ಯೂಟ್ಯೂಬ್ ಸ್ವೀಕರಿಸದೆ ತಿರಸ್ಕರಿಸಿದೆ.
ನೇರಪ್ರಸಾರದಲ್ಲಿ ಯಾವುದಾದರೂ ಕಾಪಿರೈಟ್ ವಿಷಯಗಳು ಇದ್ದಿರಬಹುದು, ಹಾಗಾಗಿಯೇ ನಿರ್ಬಂಧ ವಿಧಿಸಲಾಗಿದೆ. ಏಳು ದಿನಗಳ ಕಾಲ ಇನ್ನೇನೂ ಮಾಡುವ ಹಾಗಿಲ್ಲ ಎಂದು ಕೈಚೆಲ್ಲಿದೆ.
ದೇಶದ ಆದಷ್ಟು ಹೆಚ್ಚು ಸಂಖ್ಯೆಯ ಜನರಿಗೆ ಗಣರಾಜ್ಯೋತ್ಸವ ದಿನಾಚರಣೆಯಂತಹ ಮಹತ್ವದ ರಾಷ್ಟ್ರೀಯ ಕಾರ್ಯಕ್ರಮಗಳ ಸಾರ ಹಾಗೂ ಸಂದೇಶ ತಲುಪಿಸುವ ಉದ್ದೇಶದಿಂದ ಮಾಧ್ಯಮ ಸಂಸ್ಥೆಗಳು ಯಾವುದೇ ಲಾಭದ ಉದ್ದೇಶ ಇಲ್ಲದೆ ತಮ್ಮ ಚಾನಲ್ ಗಳಲ್ಲಿ ನೇರ ಪ್ರಸಾರ ನೀಡುತ್ತವೆ. ಇದು ಬಹಳ ಹಿಂದಿನಿಂದಲೂ ನಡೆದು ಬಂದಿರುವ ಪದ್ಧತಿ. ಇದಕ್ಕೆ ಸರಕಾರದಿಂದ ಯಾವುದೇ ನಿರ್ಬಂಧವಿಲ್ಲ.
ಗುರುವಾರವೂ ಕನ್ನಡ ಸಹಿತ ದೇಶದ ವಿವಿಧ ಭಾಷೆಗಳ ಹಲವಾರು ಯೂಟ್ಯೂಬ್ ಚಾನಲ್ ಗಳು ಗಣರಾಜ್ಯೋತ್ಸವ ಕಾರ್ಯಕ್ರಮದ ನೇರ ಪ್ರಸಾರ ನೀಡಿವೆ. ಆದರೆ ಯೂಟ್ಯೂಬ್ ಇಂತಹ ಕಾರ್ಯಕ್ರಮವೊಂದನ್ನು ಪ್ರಸಾರ ಮಾಡಿದ್ದಕ್ಕೆ ವಾರ್ತಾಭಾರತಿಗೆ ನಿರ್ಬಂಧ ವಿಧಿಸಿದ್ದು ಮಾತ್ರವಲ್ಲದೆ ವಿವರಣೆ ನೀಡಿದ ಮೇಲೂ ಅದನ್ನು ಸ್ವೀಕರಿಸದೆ ನಿರ್ಬಂಧ ಮುಂದುವರಿಸಿರುವುದು ಬಹಳ ವಿಚಿತ್ರವಾಗಿದೆ.ಈ ಬಗ್ಗೆ ವಾರ್ತಾಭಾರತಿ ಯೂಟ್ಯೂಬ್ ಗೆ ಮತ್ತೆ ಮನವಿ ಸಲ್ಲಿಸಲಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್