ಮಂಗಳೂರು: ಇತ್ತೀಚೆಗೆ ದ.ಕ.ಜಿಲ್ಲೆಯಲ್ಲಿ ನಡೆದ ಅಮಾಯಕ ಮುಸ್ಲಿಂ ಯುವಕರ ಹತ್ಯೆಯನ್ನು ಸಮರ್ಥಿಸಿ, ಪ್ರಚೋದನಕಾರಿ ಭಾಷಣ ಮಾಡಿದ ಶರಣ್ ಪಂಪ್ವೆಲ್ ವಿರುದ್ಧ ಮುಸ್ಲಿಮ್ ನಿಯೋಗದಿಂದ ದೂರು ದಾಖಲು.
ಇತ್ತೀಚೆಗೆ ಶರಣ್ ಪಂಪ್ವೆಲ್, ಸಭೆ ಒಂದರಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿ ಮುಸ್ಲಿಮ್ ಸಮುದಾಯದ ಹಲ್ಲೆ ಇತ್ಯಾದಿಗಳನ್ನು ಸಮರ್ಥಿಸಿ ಕೊಂಡಿದ್ದು, ಸಂಭಾವ್ಯ ಅಹಿತಕರ ಪರಿಣಾಮ ಸೃಷ್ಟಿಯಾಗುವ ಬಗ್ಗೆ ಇಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ನೇತೃತ್ವದ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಮತ್ತು ದೂರು ಸಲ್ಲಿಸಿತು.
ನಿಯೋಗದಲ್ಲಿ ಸದಸ್ಯರಾದ ಅಬ್ದುಲ್ ಜಲೀಲ್ (ಅದ್ದು )ಕೃಷ್ಣಾಪುರ , ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ನಾಯಕರಾದ ಅಶ್ರಫ್ ಕಿನಾರ, ಗಡಿನಾಡು ವಕ್ತಾರ ಸಿದ್ದೀಖ್ ತಲಪಾಡಿ, ವಕೀಲರಾದ ಸರ್ಫ್ರಾಜ್, ಸಾಮಾಜಿಕ ಕಾರ್ಯಕರ್ತ ಸೋಶಿಯಲ್ ಫಾರೂಕ್, ಮುಸ್ಲಿಂ ಐಕ್ಯತಾ ವೇದಿಕೆ ಕುದ್ರೋಳಿ ಅಧ್ಯಕ್ಷರಾದ ಯಾಸೀನ್ ಕುದ್ರೋಳಿ, ಸಿಎಂ ಮುಸ್ತಫಾ, ಹಬೀಬುಲ್ಲಾ ಕಣ್ಣೂರು (ಕೆಪಿಸಿಸಿ ), ಮುಸ್ಲಿಂ ಐಕ್ಯತಾ ವೇದಿಕೆ ಸುರತ್ಕಲ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶರೀಫ್, ಮೊಹಮ್ಮದ್ ಸಾಲಿಹ್ ಬಜಪೆ, ಸಬ್ಬೀರ್ ತಲಪಾಡಿ ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ