ಪುತ್ತೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಬನ್ನೂರು ಬ್ರಾಂಚ್ ಇದರ ವಾರ್ಷಿಕ ಮಹಾಸಭೆಯು ಫೆಬ್ರವರಿ 05-2023 ಭಾನುವಾರ SYS ಬ್ರಾಂಚ್ ಅಧ್ಯಕ್ಷ ಬಹು| ಇಸ್ಮಾಈಲ್ ಹಾಜಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಹು|ಇದ್ದುಕುಂಞ ಮದನಿ ದುಆ ನೆರವೇರಿಸಿದರು. ತಾಜುಲ್ ಉಲಮಾ ಸುನ್ನೀ ಚಾರಿಟೇಬಲ್ ಟ್ರಸ್ಟ್ ಬನ್ನೂರು ಇದರ ಪ್ರಧಾನ ಕಾರ್ಯದರ್ಶಿ ಬಹು| ಸೈಫುದ್ದೀನ್ ಸಅದಿ ಪ್ರಾಸ್ತಾವಿಕ ಭಾಷಣ ಮಾಡಿದರು. SYS ಪ್ರಧಾನ ಕಾರ್ಯದರ್ಶಿ K.H ಅಬ್ದುಲ್ಲಾ ಮುಸ್ಲಿಯಾರ್ ಸ್ವಾಗತಿಸಿ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಚುನಾವಣಾ R.O ಆಗಿ ಆಗಮಿಸಿದ ಜಿಲ್ಲಾ ಕಾರ್ಯದರ್ಶಿ ಸ್ವಾಲಿಹ್ ಮುರ, ರಾಜ್ಯ ಇಸಾಬ ಡೈರೆಕ್ಟರ್ ಇಖ್ಬಾಲ್ ಬಪ್ಪಳಿಗೆ KMJ, SYS ಸಮಿತಿಗಳ ಆಯ್ಕೆ ಪ್ರಕ್ರಿಯೆಗೆ ನಾಯಕತ್ವ ನೀಡಿದರು.
ನೂತನವಾಗಿ ಅಸ್ಥಿತ್ವಕ್ಕೆ ಬಂದ KMJ ಅಧ್ಯಕ್ಷರಾಗಿ ಅಬ್ದುಲ್ ಮಜೀದ್ ಅಕ್ಕರೆ,ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಹಾಜಿ ವಾಡರಗುರಿ ಕೋಶಾಧಿಕಾರಿಯಾಗಿ ಇಸ್ಮಾಈಲ್ ಹಾಜಿ ಅಕ್ಕರೆ ಉಪಾಧ್ಯಕ್ಷರಾಗಿ ಅಬೂಬಕ್ಕರ್ ಹಾಜಿ ಪಾಪ್ಲಿ, ಇಬ್ರಾಹೀಂ ಸುಪಾರಿ, ಜೊತೆ ಕಾರ್ಯದರ್ಶಿಯಾಗಿ K.H ಅಬ್ದುಲ್ಲಾ ಮುಸ್ಲಿಯಾರ್ ,ಪಿ.ಬಿ ಅಬ್ದುರ್ರಹ್ಮಾನ್ ಮದನಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ 11 ಮಂದಿ ಆಯ್ಕೆಯಾದರು.
SYS ಅಧ್ಯಕ್ಷರಾಗಿ ಉಮರ್ ವಾಡರಗುರಿ,ಪ್ರಧಾನ ಕಾರ್ಯದರ್ಶಿಯಾಗಿ ಉಮರುಲ್ ಫಾರೂಖ್ ಬನ್ನೂರು ಗುತ್ತು,ಕೋಶಾಧಿಕಾರಿ ಯಾಗಿ ಶಮೀರ್ ಅಕ್ಕರೆ,ದಅವಾ ಕಾರ್ಯದರ್ಶಿಯಾಗಿ ಸೈಫುಲ್ಲಾ ಸಅದಿ, ಉಪಾಧ್ಯಕ್ಷರಾಗಿ ಶೇಖ್ ಇಸ್’ಹಾಖ್ ಸಾಂತ್ವನ ಕಾರ್ಯದರ್ಶಿಯಾಗಿ ಮುಹಮ್ಮದ್ ಅಲೀ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಇತರ 7 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.ಸಭೆಯ ಕೊನೆಯಲ್ಲಿ ಅಬ್ದುಲ್ಲಾ ಮುಸ್ಲಿಯಾರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)