ಮಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಗುರಿಯಾಗಿಸಿ, ಸಚಿವ ಅಶ್ವಥ್ ನಾರಾಯಣ್, ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕೆಂದು ಪ್ರಚೋದಿತ ಹೇಳಿಕೆ ನೀಡಿರುವುದು ಖಂಡನಾರ್ಹ,ಅಕ್ಸ್ಯಮ್ಮ ಅಪರಾಧ ಕೂಡಾ, ರಾಜ್ಯದ ಪೊಲೀಸು ಮಹಾ ನಿರ್ದೇಶಕರು ಈ ಹೇಳಿಕೆಯ ವಿರುದ್ಧ ಪ್ರಕರಣ ದಾಖಲಿಸಬೇಕಿದೆ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಗ್ರಹಿಸಿದ್ದಾರೆ.
ಸಿದ್ದು ವಿರುದ್ಧ ಜಾತಿ ಪ್ರಚೋದಿತ ಹೇಳಿಕೆ ನೀಡಲಾಗಿದೆ. ಮೊದಲು ಟಿಪ್ಪು ಬಗ್ಗೆಗಿನ ಹೇಳಿಕೆ ನೀಡಿ ವೈರಿಯಂತೆ ಬಿಂಬಿಸಲಾಗಿದೆ, ನಂತರ ಟಿಪ್ಪುವಿನ ಹೆಸರಿನೊಂದಿಗೆ ಸಿದ್ದರಾಮಯ್ಯರನ್ನು ಸಮೀಕರಿಸಿ ಬಿಂಬಿಸಲಾಯಿತು, ತದ ನಂತರ ಟಿಪ್ಪುವಿನ ದಾರುಣ ಅಂತ್ಯವನ್ನು ವೈಭವೀಕರಿಸಿ, ಸಿದ್ದರಾಮಯ್ಯನವರ ರಾಜಕೀಯ ಅಂತ್ಯದೊಂದಿಗೆ ಸಮೀಕರಿಸಿ ಪ್ರಚೋದಿತ ಹೇಳಿಕೆ ನೀಡಲಾಗಿದೆ.
ಇದು ಮತೀಯ ದ್ವೇಷಿತ ಹೇಳಿಕೆ ಆಗಿದೆ. ಸಿದ್ದುವನ್ನು ಗುರಿಯಾಗಿಸಿ, ಟಿಪ್ಪುವನ್ನು ಸಮೀಕರಿಸಿ, ಮುಸ್ಲಿಮ್ ಜನಾಂಗವನ್ನು ವಿರೋಧಿಸುವ ವ್ಯವಸ್ಥಿತ ಷಡ್ಯಂತ್ರದ ಕೇಶವ ಕೃಪಾ ಪ್ರೇರಿತ ಹೇಳಿಕೆ ನೀಡಲಾಗಿದೆ. ಈ ಪ್ರಚೋದನೆ ಜನರಿಗೆ ಮನವರಿಕೆ ಆಗಲು ಅಧಿಕ ಸಮಯ ಬೇಕಾಗಿಲ್ಲ ಎಂದು ಕೆ.ಅಶ್ರಫ್(ಮಾಜಿ ಮೇಯರ್) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ