ವಿಟ್ಲ : ಇಲ್ಲಿನ ಅಡ್ಯನಡ್ಕ ಎಂಬಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯಾಗಾರ ನಡೆಯುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿ ಸಂಘ ಪರಿವಾರ ಅಡ್ಡಿ ಪಡಿಸಿದ ಪ್ರಕರಣವು ವರದಿಯಾಗಿದೆ. ಆದರೆ, ಕಾರ್ಯಾಗಾರ ನಡೆಸಿದ ಸಂಘಟಕರ ವಿರುದ್ಧವೇ ಪೋಲೀಸರು ಪ್ರಕರಣ ದಾಖಲಿಸಿದ್ದನ್ನು ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಯುವ ಜನ ಸಂಘ, ಸುನ್ನೀ ಸ್ಟೂಡೆಂಟ್ ಫೆಡರೇಶನ್ ಮೂಡಂಬೈಲ್ ಅಡ್ಯನಡ್ಕ ಯುನಿಟ್ ಸಮಿತಿ ಖಂಡಿಸಿದೆ.
ಇಲ್ಲಿನ ನುಸುರತ್ತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಷನ್ ವತಿಯಿಂದ ನಡೆಸಲಾದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಪ್ರಚೋದನಕಾರಿ ಭಾಷಣ, ಇಸ್ಲಾಂ ಮತ ಪ್ರವಚನ ನಡೆಸಲಾಗಿದೆ ಎಂದು ಸಂಘ ಪರಿವಾರ ಸಂಘಟನೆಗಳು ಹೊರಿಸಿದ ಸುಳ್ಳಾರೋಪ ಮತ್ತು ನೀಡಿದ ಪ್ರಕರಣವನ್ನು ಸ್ವೀಕರಿಸಿ FIR ದಾಖಲಿಸಿದ ಪೊಲೀಸರ ನಡೆ ಖಂಡನೀಯವಾಗಿದೆ.
ಕಾರ್ಯಾಗಾರಕ್ಕೆ ನೇತೃತ್ವ ನೀಡಿದ ರಫೀಖ್ ಮಾಸ್ಟರ್ ರವರು ಅನೇಕ ಸ್ಥಳಗಳಲ್ಲಿ ಶೈಕ್ಷಣಿಕ ಕಾರ್ಯಾಗಾರ ನಡೆಸಿದ ಇತಿಹಾಸ ಹೊಂದಿರುವ ಉತ್ತಮ ವ್ಯಕ್ತಿಯಾಗಿದ್ದಾರೆ.ಅವರ ವಿರುದ್ಧ ಸುಳ್ಳಾರೋಪ ಹೊರಿಸಿರುವುದು ಖೇದಕರ.
ಅಡ್ಯನಡ್ಕ ಎಂಬ ಈ ಪ್ರದೇಶವು ಶಾಂತಿ, ಸೌಹಾರ್ದತೆಯ ಸುಂದರ ನಾಡಾಗಿದೆ. ಇಲ್ಲಿ ನುಸುರತ್ತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಷನ್ ಸಂಘಟನೆಯು ಅನೇಕ ವರ್ಷಗಳಿಂದ ಉತ್ತಮ ಕಾರ್ಯಗಳನ್ನು ನಡೆಸುತ್ತಿದೆ.ಪ್ರತಿ ವರ್ಷ ಶೈಕ್ಷಣಿಕ ಕಾರ್ಯಾಗಾರವನ್ನು ನಡೆಸುತ್ತಾ ಬಂದಿದೆ.
ಇಂತಹಾ ಉನ್ನತ ಕಾರ್ಯಗಳಿಗೆ ದಕ್ಕೆ ತರುವ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರವನ್ನು ನಡೆಸುತ್ತಿರುವ ಸಂಘ ಪರಿವಾರದ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಡ್ಯನಡ್ಕ,ಮೂಡಂಬೈಲ್ KMJ, SYS, SSF ಸಮಿತಿ ಆಗ್ರಹಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ