ಜುಬೈಲ್,ಫೆ.21: ಸಅದಿಯ ನೂತನ ಉಮ್ರಾ ಸರ್ವಿಸ್ ಆಫೀಸ್ ಇಂದು ಜುಬೈಲ್ ನಲ್ಲಿ ಲೋಕಾರ್ಪಣೆ ಗೊಂಡಿತು.
ಸಯ್ಯಿದ್ ಆಟಕೋಯ ಪಂಜಿಕಲ್ ತಂಙಳ್ ನೂತನ ಕೊಠಡಿಯನ್ನು ಉದ್ಘಾಟಿಸಿ, ದುವಾ ನಡೆಸಿ ಶುಭ ಹಾರೈಸಿದರು.


ಈ ವೇಳೆ ಕೊಲ್ಲಂಬಾಡಿ ಅಬ್ದುಲ್ ಖಾದರ್ ಸಅದಿ ಅವರು ಮಾತನಾಡಿ, ಉಮ್ರಾ ಅಲ್ಲದೆ, ಎಲ್ಲಾ ಕ್ಷೇತ್ರಗಳಲ್ಲಿ ಜುಬೈಲ್ ಸಅದಿಯಾ ಕಾರ್ಯಪ್ರವೃತವಾಗಿದ್ದು, ಇದೀಗ ಪವಿತ್ರ ಉಮ್ರಾ ಕ್ಷೇತ್ರದಲ್ಲೂ ತನ್ನ ಹೆಜೆಯನ್ನಿಟ್ಟಿರುವುದು ಸಂತಸವಾಗಿದೆ.

ಅನಾಥ ಅತಿಥಿಗಳಿಗೆ ಸಂರಕ್ಷಣೆ ನೀಡುತ್ತಿರುವ ಸಂಸ್ಥೆಗೆ ಬೇಕಾಗಿ ಎಲ್ಲರೂ ಕೈ ಜೋಡಿಸಿ, ಸಂಸ್ಥೆಯ ಉನ್ನತಿಗೆ ಶ್ರಮಿಸಬೇಕೆಂದು ಕರೆ ನೀಡಿದರು. ಬಳಿಕ ಅಲ್ ಫಲಾಹ್ ನಝೀರ್ ಹಾಗೂ ಯೂಸುಫ್ ಸಅದಿ ಅವರು ಸಅದಿಯಾ ಕುರಿತು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಸಯ್ಯಿದ್ ಶುಕೂರ್ ತಂಙಳ್, ಅಬ್ದುಲ್ ರಹ್ಮಾನ್ ಮದನಿ, ಹಬೀಬ್ ಸಖಾಫಿ, ಮುಹಮ್ಮದ್ ಸಅದಿ, ಅಬ್ದುಲ್ ಖಾದರ್ ಸಅದಿ, ಮೂಸ ಹಾಜಿ ಕಿನ್ಯ ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು