ಬೆಂಗಳೂರು,ಫೆ.22: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಯಚೂರು ಮೂಲದ ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ಮುಂಜಾನೆ ವರದಿಯಾಗಿದೆ.
ರಾಯಚೂರು ಮೂಲದ ಒಂದೇ ಕುಟುಂಬದ ಶಫೀದ್ ಹುಸೈನ್ ಸುಲ್ಲದ್, ಬಡೇಜಾನ್ ಸುಲ್ಲದ್, ಸಿರಾಜ್ ಬೇಗಮ್ ಸುಲ್ಲದ್, ಸಮೀರ್ ಸುಲ್ಲದ್ ಹಾಗೂ ಕಲಬುರಗಿಯ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಮೈನುದ್ದೀನ್ ಸಾಹೇಬ್, ಸೇಡಂನ ಬೇಗಮ್ ಮುಹಮ್ಮದ್ ಅಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಇವರು ಸಾಲಿಹೀನ್ ಎಂಬ ಹಜ್ ಮತ್ತು ಉಮ್ರಾ ಟೂರ್ ಆ್ಯಂಡ್ ಟ್ರಾವೆಲ್ಸ್ ಕಂಪನಿಯ ಮೂಲಕ ಪವಿತ್ರ ಮಕ್ಕಾ ಮತ್ತು ಮದೀನಾ ಪ್ರವಾಸ ಕೈಗೊಂಡಿದ್ದರು. ಉಮ್ರಾ ನಿರ್ವಹಿಸಿ ನಿನ್ನೆ ರಾತ್ರಿ ಬಸ್ ಮೂಲಕ ಮದೀನಾಕ್ಕೆ ತೆರಳುತ್ತಿದ್ದಾಗ ಇವರು ಪ್ರಯಾಣಿಸುತ್ತಿದ್ದ ಬಸ್ ಮಕ್ಕಾದಿಂದ 250 ಕಿ.ಮೀ.ದೂರದಲ್ಲಿ ಮುಂದೆ ಚಲಿಸುತ್ತಿದ್ದ ಟ್ರಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ