ವಿಟ್ಲ : ಇಲ್ಲಿನ ಕೊಡುಂಗಾಯಿಯ ಇತಿಹಾಸ ಪ್ರಸಿದ್ಧ ಕೇಂದ್ರ ಮುಹ್ಯದ್ದೀನ್ ಜುಮಾ ಮಸೀದಿಯ ನವೀಕೃತ ಮಸ್ಜಿದ್ ಕಟ್ಟಡದ ಉದ್ಘಾಟನಾ ಸಮಾರಂಭವು ಫೆಬ್ರವರಿ 26 ರಂದು ನಡೆಯಲಿದೆ.
26 ರಂದು ಬೆಳಿಗ್ಗೆ ಗಂಟೆ 9 ಕ್ಕೆ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು ಬೆಳಿಗ್ಗೆ ಗಂಟೆ 10 ಕ್ಕೆ ನವೀಕೃತ ಮಸ್ಜಿದ್ ಕಟ್ಟಡವನ್ನು ಪಾಣಕ್ಕಾಡ್ ಸಯ್ಯಿದ್ ಹಮೀದ್ ಅಲಿ ಶಿಹಾಬ್ ತಂಙಳ್ ಅವರು ಉದ್ಗಾಟಿಸುವರು, ಸಯ್ಯಿದ್ ಇಬ್ರಾಹಿಂ ಪೂಕುಂಞ ತಂಙಳ್ ಉದ್ಯಾವರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಖಾಝಿ ಶೈಖುನಾ ಮಾಣಿ ಉಸ್ತಾದ್ ಅವರು ವಕ್ಫ್ ನಿರ್ವಹಣೆ ನಡೆಸುವರು.
ಬಳಿಕ ನಡೆಯುವ ಸಭಾ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಸಂಯುಕ್ತ ಖಾಝಿ ತ್ವಾಖಾ ಉಸ್ತಾದ್ ಅವರು ಉದ್ಗಾಟಿಸಲಿದ್ದು, ‘ಸಮಸ್ತ’ ಕೇಂದ್ರ ಮುಶಾವರ ಸದಸ್ಯರಾದ ಖಾಝಿ ಬಂಬ್ರಾಣ ಉಸ್ತಾದ್ ಮತ್ತು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಅವರು ಮುಖ್ಯ ಭಾಷಣ ನಡೆಸುವರು. ವಾಲೆಮುಂಡೋವು ಉಸ್ತಾದ್, ಸ್ಥಳೀಯ ಖತೀಬ್ ಅಬೂಬಕ್ಕರ್ ಸಿದ್ದೀಕ್ ಅರ್ಶದಿ, ಮತ್ತು ಕೆ.ಬಿ.ದಾರಿಮಿ ಮೊದಲಾದವರು ಉದ್ಬೋಧನೆ ನೀಡುವರು.
ಶಾಸಕ ರಾಜೇಶ್ ನಾಯ್ಕ್ , ಕರ್ನಾಟಕ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಎಂ.ಎಲ್.ಸಿ.ಗಳಾದ ಮಂಜುನಾಥ ಭಂಡಾರಿ, ಬಿ.ಎಂ.ಫಾರೂಕ್, ಮಾಜಿ ಸಚಿವ ರಮಾನಾಥ ರೈ, ವಿಟ್ಲ ಸರ್ಕಲ್ ಇನ್ ಸ್ಪೆಕ್ಟರ್ ನಾಗರಾಜ್, ದ.ಕ.ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಹಾಜಿ ನಾಸಿರ್ ಲಕ್ಕಿಸ್ಟಾರ್, ರಾಜ್ಯ ಜೆ.ಡಿ.ಎಸ್.ನಾಯಕ ಮುಹಮ್ಮದ್ ಕುಂಞ ವಿಟ್ಲ, ಇಕೋವಿಷನ್ ಮುಖ್ಯಸ್ಥರಾದ ರಾಜರಾಂ ಭಟ್ ಬಲಿಪಗುಳಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವೀಶ್ ಶೆಟ್ಟಿ ,ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ಎಸ್.ಮುಹಮ್ಮದ್, ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಬಾಶ್ ಚಂದ್ರ ಶೆಟ್ಟಿ ,ಎಸ್.ಡಿ.ಪಿ.ಐ.ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆ ಮಜಲು ಮೊದಲಾದ ಹಲವಾರು ಗಣ್ಯರು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮಧ್ಯಾಹ್ನ ಸಾರ್ವಜನಿಕ ಅನ್ನದಾನ ನಡೆಯಲಿದೆ.
ಅದೇ ದಿನ ರಾತ್ರಿ ಗಂಟೆ 7-30 ರಿಂದ ರಾಜ್ಯ ಮಟ್ಟದ ಅತ್ಯಾಕರ್ಷಕ ದಫ್ ಸ್ಪರ್ಧಾ ಕಾರ್ಯಕ್ರಮ ಜರಗಲಿದ್ದು , ಜಮಾಅತ್ ಅಧ್ಯಕ್ಷ ಎ.ಎಂ. ಮುಹಮ್ಮದ್ ಕುಂಞ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸುವರು. ಹಲವಾರು ಗಣ್ಯ ವ್ಯಕ್ತಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜನವರಿ 27 ರಂದು ರಾತ್ರಿ ಗಂಟೆ 8 ರಿಂದ ಬದ್ರಿಯತ್ ಕಮಿಟಿಯ 36 ನೆಯ ವಾರ್ಷಿಕ ಕಾರ್ಯಕ್ರಮ ನಡೆಯಲಿದ್ದು, ಸಯ್ಯಿದ್ ಎನ್.ಪಿ.ಎಂ. ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ ಅವರು ಸಮಾರಂಭದಲ್ಲಿ ದುವಾಶೀರ್ವಚನಕ್ಕೆ ನೇತೃತ್ವ ನೀಡುವರು. ಶಾಕಿರ್ ಸಖಾಫಿ ಮಂಬಾಡ್ ಅವರಿಂದ ಮುಖ್ಯ ಪ್ರಭಾಷಣ ನಡೆಯಲಿದೆ.
ಜನವರಿ 28 ರಂದು ರಾತ್ರಿ ಗಂಟೆ 8 ರಿಂದ ನುಸ್ರತುಲ್ ಮಸಾಕೀನ್ ಕುತುಬಿಯತ್ ಕಮಿಟಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ಸಯ್ಯಿದ್ ಅಲೀ ಬಾಫಖಿ ತಂಙಳ್ ಕೊಯಿಲಾಂಡಿ ಅವರು ದುವಾಶೀರ್ವಚನಕ್ಕೆ ನೇತೃತ್ವ ನೀಡಲಿರುವರು, ಅನ್ವರ್ ಅಲಿ ಹುದವಿ ಮಲಪ್ಪುರಂ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಹೀಗೆ ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮ ಗಳಲ್ಲಿ ಹಲವಾರು ಧಾರ್ಮಿಕ ,ಸಾಮಾಜಿಕ ,ರಾಜಕೀಯ ನಾಯಕರು ಭಾಗವಹಿಸುವರು ಎಂದು ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷರಾದ ಕೆ.ಎಂ.ಎ.ಕೊಡುಂಗಾಯಿ ಮತ್ತು ಕನ್ವಿನರ್ ಅಬ್ದುಲ್ ಹಮೀದ್ ಹಾಜಿ ಕೊಡಂಗಾಯಿ , ಜಮಾಅತ್ ಸಮಿತಿ ಅಧ್ಯಕ್ಷ ಎ.ಎಂ.ಅಹ್ಮದ್ ಕುಂಞ ಮತ್ತು ಕಾರ್ಯದರ್ಶಿ ಸಿ.ಎಚ್.ಅಬ್ದುಲ್ ಖಾದರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ