ವಿಟ್ಲ : ಇಲ್ಲಿನ ಕೊಡುಂಗಾಯಿಯ ಇತಿಹಾಸ ಪ್ರಸಿದ್ಧ ಕೇಂದ್ರ ಮುಹ್ಯದ್ದೀನ್ ಜುಮಾ ಮಸೀದಿಯ ನವೀಕೃತ ಮಸ್ಜಿದ್ ಕಟ್ಟಡದ ಉದ್ಘಾಟನಾ ಸಮಾರಂಭವು ಫೆಬ್ರವರಿ 26 ರಂದು ನಡೆಯಲಿದೆ.
26 ರಂದು ಬೆಳಿಗ್ಗೆ ಗಂಟೆ 9 ಕ್ಕೆ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು ಬೆಳಿಗ್ಗೆ ಗಂಟೆ 10 ಕ್ಕೆ ನವೀಕೃತ ಮಸ್ಜಿದ್ ಕಟ್ಟಡವನ್ನು ಪಾಣಕ್ಕಾಡ್ ಸಯ್ಯಿದ್ ಹಮೀದ್ ಅಲಿ ಶಿಹಾಬ್ ತಂಙಳ್ ಅವರು ಉದ್ಗಾಟಿಸುವರು, ಸಯ್ಯಿದ್ ಇಬ್ರಾಹಿಂ ಪೂಕುಂಞ ತಂಙಳ್ ಉದ್ಯಾವರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಖಾಝಿ ಶೈಖುನಾ ಮಾಣಿ ಉಸ್ತಾದ್ ಅವರು ವಕ್ಫ್ ನಿರ್ವಹಣೆ ನಡೆಸುವರು.
ಬಳಿಕ ನಡೆಯುವ ಸಭಾ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಸಂಯುಕ್ತ ಖಾಝಿ ತ್ವಾಖಾ ಉಸ್ತಾದ್ ಅವರು ಉದ್ಗಾಟಿಸಲಿದ್ದು, ‘ಸಮಸ್ತ’ ಕೇಂದ್ರ ಮುಶಾವರ ಸದಸ್ಯರಾದ ಖಾಝಿ ಬಂಬ್ರಾಣ ಉಸ್ತಾದ್ ಮತ್ತು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಅವರು ಮುಖ್ಯ ಭಾಷಣ ನಡೆಸುವರು. ವಾಲೆಮುಂಡೋವು ಉಸ್ತಾದ್, ಸ್ಥಳೀಯ ಖತೀಬ್ ಅಬೂಬಕ್ಕರ್ ಸಿದ್ದೀಕ್ ಅರ್ಶದಿ, ಮತ್ತು ಕೆ.ಬಿ.ದಾರಿಮಿ ಮೊದಲಾದವರು ಉದ್ಬೋಧನೆ ನೀಡುವರು.
ಶಾಸಕ ರಾಜೇಶ್ ನಾಯ್ಕ್ , ಕರ್ನಾಟಕ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಎಂ.ಎಲ್.ಸಿ.ಗಳಾದ ಮಂಜುನಾಥ ಭಂಡಾರಿ, ಬಿ.ಎಂ.ಫಾರೂಕ್, ಮಾಜಿ ಸಚಿವ ರಮಾನಾಥ ರೈ, ವಿಟ್ಲ ಸರ್ಕಲ್ ಇನ್ ಸ್ಪೆಕ್ಟರ್ ನಾಗರಾಜ್, ದ.ಕ.ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಹಾಜಿ ನಾಸಿರ್ ಲಕ್ಕಿಸ್ಟಾರ್, ರಾಜ್ಯ ಜೆ.ಡಿ.ಎಸ್.ನಾಯಕ ಮುಹಮ್ಮದ್ ಕುಂಞ ವಿಟ್ಲ, ಇಕೋವಿಷನ್ ಮುಖ್ಯಸ್ಥರಾದ ರಾಜರಾಂ ಭಟ್ ಬಲಿಪಗುಳಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವೀಶ್ ಶೆಟ್ಟಿ ,ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ಎಸ್.ಮುಹಮ್ಮದ್, ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಬಾಶ್ ಚಂದ್ರ ಶೆಟ್ಟಿ ,ಎಸ್.ಡಿ.ಪಿ.ಐ.ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆ ಮಜಲು ಮೊದಲಾದ ಹಲವಾರು ಗಣ್ಯರು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮಧ್ಯಾಹ್ನ ಸಾರ್ವಜನಿಕ ಅನ್ನದಾನ ನಡೆಯಲಿದೆ.
ಅದೇ ದಿನ ರಾತ್ರಿ ಗಂಟೆ 7-30 ರಿಂದ ರಾಜ್ಯ ಮಟ್ಟದ ಅತ್ಯಾಕರ್ಷಕ ದಫ್ ಸ್ಪರ್ಧಾ ಕಾರ್ಯಕ್ರಮ ಜರಗಲಿದ್ದು , ಜಮಾಅತ್ ಅಧ್ಯಕ್ಷ ಎ.ಎಂ. ಮುಹಮ್ಮದ್ ಕುಂಞ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸುವರು. ಹಲವಾರು ಗಣ್ಯ ವ್ಯಕ್ತಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜನವರಿ 27 ರಂದು ರಾತ್ರಿ ಗಂಟೆ 8 ರಿಂದ ಬದ್ರಿಯತ್ ಕಮಿಟಿಯ 36 ನೆಯ ವಾರ್ಷಿಕ ಕಾರ್ಯಕ್ರಮ ನಡೆಯಲಿದ್ದು, ಸಯ್ಯಿದ್ ಎನ್.ಪಿ.ಎಂ. ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ ಅವರು ಸಮಾರಂಭದಲ್ಲಿ ದುವಾಶೀರ್ವಚನಕ್ಕೆ ನೇತೃತ್ವ ನೀಡುವರು. ಶಾಕಿರ್ ಸಖಾಫಿ ಮಂಬಾಡ್ ಅವರಿಂದ ಮುಖ್ಯ ಪ್ರಭಾಷಣ ನಡೆಯಲಿದೆ.
ಜನವರಿ 28 ರಂದು ರಾತ್ರಿ ಗಂಟೆ 8 ರಿಂದ ನುಸ್ರತುಲ್ ಮಸಾಕೀನ್ ಕುತುಬಿಯತ್ ಕಮಿಟಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ಸಯ್ಯಿದ್ ಅಲೀ ಬಾಫಖಿ ತಂಙಳ್ ಕೊಯಿಲಾಂಡಿ ಅವರು ದುವಾಶೀರ್ವಚನಕ್ಕೆ ನೇತೃತ್ವ ನೀಡಲಿರುವರು, ಅನ್ವರ್ ಅಲಿ ಹುದವಿ ಮಲಪ್ಪುರಂ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಹೀಗೆ ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮ ಗಳಲ್ಲಿ ಹಲವಾರು ಧಾರ್ಮಿಕ ,ಸಾಮಾಜಿಕ ,ರಾಜಕೀಯ ನಾಯಕರು ಭಾಗವಹಿಸುವರು ಎಂದು ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷರಾದ ಕೆ.ಎಂ.ಎ.ಕೊಡುಂಗಾಯಿ ಮತ್ತು ಕನ್ವಿನರ್ ಅಬ್ದುಲ್ ಹಮೀದ್ ಹಾಜಿ ಕೊಡಂಗಾಯಿ , ಜಮಾಅತ್ ಸಮಿತಿ ಅಧ್ಯಕ್ಷ ಎ.ಎಂ.ಅಹ್ಮದ್ ಕುಂಞ ಮತ್ತು ಕಾರ್ಯದರ್ಶಿ ಸಿ.ಎಚ್.ಅಬ್ದುಲ್ ಖಾದರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ