ಮಸ್ಕತ್: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ DKSC ಒಮಾನ್ ವತಿಯಿಂದ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಸನ್ಮಾನ ಕಾರ್ಯಕ್ರಮ ಮಸ್ಕತ್ ನ ಅಲ್ ಫೈಲಾಕ್ ರೆಸ್ಟೋರೆಂಟ್ ಸಭಾಂಗಣದಲ್ಲಿ ದಿನಾಂಕ 04-03-2023 ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಸೇರಿದವರನ್ನು ಶುಹೈಬ್ ಮುಹಿಯದ್ದೀನ್ ಪಡುಬಿದ್ರಿ ಸ್ವಾಗತಿಸಿದರು. DKSC ಅಧ್ಯಕ್ಷರಾದ ಹಾಜಿ ಮೋನಬ್ಬ ಅಬ್ದುರ್ರಹ್ಮಾನ್ ಎರ್ಮಾಳ್ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವಾರು ಗಣ್ಯ ವ್ಯಕಿಗಳು ಭಾಗವಹಿಸದರು ಹಾಗೂ ಹರೇಕಳ ಹಾಜಬ್ಬರ ಸಾಧನೆಯ ಕುರಿತು ವಿವರಿಸಿದರು.

ನಂತರ ಹರೇಕಳ ಹಾಜಬ್ಬರವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಹಾಜಬ್ಬರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಅಶ್ರಫ್ ಮಂಗಳೂರು, ಜನಾಬ್ ಅಯ್ಯೂಬ್ ಕೋಡಿ, ಇಬ್ರಾಹೀಂ ಹಾಜಿ ಅತ್ರಾಡಿ, ಆರಿಫ್ ಕೋಡಿ, ಉಬೈದುಲ್ಲಾ ಸಖಾಫಿ, ಯೂಸುಫ್ ಮುಕ್ಕ, ಸುಹೈಲ್ ಉಪ್ಪಿನಂಗಡಿ, ಕಲಂದರ್ ಬಾವ ಉಸ್ತಾದ್ ಇವರುಗಳು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಅನ್ಸಾರ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು. DKSC ಒಮಾನ್ ಪ್ರಧಾನ ಕಾರ್ಯದರ್ಶಿ ಮುಹಿಯದ್ದೀನ್ ಪಡುಬಿದ್ರಿ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ