ಉಳ್ಳಾಲ,ಮಾ.8: ಇಲ್ಲಿನ ಇತಿಹಾಸ ಪ್ರಸಿದ್ಧ ಖುತುಬುಝ್ಝಮಾನ್ ಅಸ್ಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ.) ದರ್ಗಾ ಮತ್ತು ಕೇಂದ್ರ ಜುಮಾ ಮಸೀದಿ(402) ನೂತನ ಅಧ್ಯಕ್ಷರಾದ ಬಿ.ಜಿ.ಹನೀಫ್ ಹಾಜಿ ನೇತೃತ್ವದ ಆಡಳಿತ ಸಮಿತಿಯು ಇಂದು ಪ್ರಮಾಣವಚನ ಸ್ವೀಕರಿಸುವ ಮೂಲಕ ಅಸ್ತಿತ್ವಕ್ಕೆ ಬಂದಿದೆ.
ಸಮಿತಿಯ ಉಪಾಧ್ಯಕ್ಷರಾದ ಅಳೇಕಲ ಮೊಹಲ್ಲಾದ ರೈಟ್ ವೇ ಅಶ್ರಫ್,ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೊಶಾಧಿಕಾರಿ ನಾಝಿಂ ಕೋಟೆಪುರ ಸೇರಿದಂತೆ ನೂತನ ಸಮಿತಿಯ ಸರ್ವ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.
ಇತ್ತೀಚೆಗೆ ರಾಜ್ಯ ವಕ್ಫ್ ಮಂಡಳಿಯ ನಿರ್ದೇಶದಂತೆ ನ್ಯಾಯುತ ಚುನಾವಣೆ ನಡೆಸಿ, 55 ಸದಸ್ಯರನ್ನು ಆರಿಸಲಾಗಿತ್ತು, ಆನಂತರ, ವಖ್ಫ್ ಬೋರ್ಡ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹೆಚ್ಚು ಮತಗಳಿಸುವ ಮೂಲಕ ಬಿ.ಜಿ.ಹನೀಫ್ ಹಾಜಿಯವರು ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದರು.
ಇಂದು ಉಳ್ಳಾಲದಲ್ಲಿ ನಡೆದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧಿಕಾರಿ ಪ್ರಮಾಣ ವಚನ ಬೋಧಿಸುವ ಮೂಲಕ ನೂತನ ಆಡಳಿತ ಸಮಿತಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಈ ಮೂಲಕ, ಉಳ್ಳಾಲ ದರ್ಗಾದಲ್ಲಿ 7 ವರೆ ವರ್ಷಗಳ ಬಳಿಕ ಮತ್ತೆ ನ್ಯಾಯುತ ನೂತನ ಸಮಿತಿಯು ಅಸ್ತಿತ್ವಕ್ಕೆ ಬಂದಿದೆ.
ಕೋಟೆಪುರ, ಮೇಲಂಗಡಿ, ಮುಕ್ಕಚೇರಿ, ಅಳೇಕಲ, ಕಲ್ಲಾಪು ಹೀಗೆ 5 ಕರಿಯ (ವಲಯ)ಗಳಿಂದ ತಲಾ 11 ಮಂದಿಯಂತೆ 55 ಮಂದಿ ಸದಸ್ಯರ ಆಯ್ಕೆಗೆ 80 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
2016-17 ನೇ ಸಾಲಿನಲ್ಲಿ ನ್ಯಾಯಯುತವಾದ ಚುನಾವಣೆ ನಡೆಯದೆ ಅನಧಿಕೃತವಾಗಿ ಆಡಳಿತವನ್ನು ವಶಪಡಿಸಿಕೊಂಡು ಸ್ವಯಂ ಘೋಷಿತವಾಗಿ ಪದಾಧಿಕಾರಿಗಳನ್ನು ನೇಮಿಸಿ ಪ್ರಸ್ತುತ ವಜಾಗೊಂಡಿರುವ ಅಬ್ದುಲ್ ರಶೀದ್ ಮತ್ತು ಸಹವರ್ತಿಗಳು ಕಳೆದ 7ವರೆ ವರ್ಷದಿಂದ ಕಾನೂನು ಉಲ್ಲಂಘನೆ, ಅವ್ಯವಹಾರ, ಭ್ರಷ್ಟಾಚಾರ, ದಬ್ಬಾಳಿಕೆ, ಸರ್ವಾಧಿಕಾರ ಮತ್ತು ಸಮಾಜಘಾತುಕ ಶಕ್ತಿಗಳ ಪೋಷಣೆಯನ್ನು ನಡೆಸುತ್ತಾ ಬಂದಿತ್ತು.


















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ