ಮಕ್ಕಾ: ಉಮ್ರಾ ಕರ್ಮ ನಿರ್ವಹಿಸಲು ಮಂಗಳೂರಿನ ಅಲ್ ಸದೀಮ್ ಟೂರ್ಸ್ & ಟ್ರಾವೆಲ್ಸ್ ನಲ್ಲಿ ಮಕ್ಕಾ ತಲುಪಿದ ಉಡುಪಿ ಮೂಲದ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮಕ್ಕಾದಲ್ಲಿ ನಿಧನ ಹೊಂದಿದರು.
ಮೃತಪಟ್ಟ ಮಹಿಳೆಯರು ಬ್ರಹ್ಮಾವರ ತಾಲೂಕಿನ ಮಧುವನ ಅಚ್ಲಾಡಿಯ ಮರಿಯಮ್ಮ (66 ವ) ಹಾಗೂ ಅವರ ಅತ್ತೆಯ ಮಗಳು ಖತೀಜಮ್ಮ (68 ವ) ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಸಾಗಿಸುವಲ್ಲಿ ಹಾಗೂ ಇಬ್ಬರ ದಫನ ಕಾರ್ಯಕ್ಕೆ ಬೇಕಾದ ಕಾನೂನು ಪ್ರಕ್ರಿಯೆಗಳು, ಎಲ್ಲಾ ಅವಶ್ಯ ದಾಖಲೆಗಳನ್ನು ಸರಿಪಡಿಸಿ ಸಹಕರಿಸುವಲ್ಲಿ ಕೆಸಿಎಫ್ ಜಿದ್ದಾ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷರು ಹಾಗೂ ಕೆಸಿಎಫ್ ಮಕ್ಕತುಲ್ ಮುಕರ್ರಮಾ ಸೆಕ್ಟರ್ ನೇತಾರರಾದ ಮೂಸಾ ಹಾಜಿ ಕಿನ್ಯ ಹಾಗೂ ಕೆಸಿಎಫ್ ಮದೀನತುಲ್ ಮುನವ್ವರ ಝೋನ್ ಸಾಂತ್ವನ ಇಲಾಖೆ ಕಾರ್ಯದರ್ಶಿ ಅಬ್ದುಲ್ ರಝ್ಝಾಖ್ ಉಳ್ಳಾಲರವರು ಪ್ರಮುಖ ಪಾತ್ರ ವಹಿಸಿದ್ದರು.
ಹೀಗೆ ಹಲವು ವರ್ಷಗಳಿಂದ ಪುಣ್ಯ ಭೂಮಿಗಳಾದ ಮಕ್ಕಾ ಮತ್ತು ಮದೀನಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ಇದರ ಕಾರ್ಯಕರ್ತರು ಇಂತಹ ಮರಣ ಪ್ರಕ್ರಿಯೆಗಳಲ್ಲಿ ಮರಣ ಹೊಂದಿದ ಸಂಬಂಧಿಕರು ಹಾಗೂ ಉಮ್ರಾ ಟ್ರಾವೆಲ್ಸ್ ನವರೊಂದಿಗೆ ಕೈ ಜೋಡಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್