ರಿಯಾದ್: ( ಜನಧ್ವನಿ ವಾರ್ತೆ) ಕಲ್ಚರಲ್ ಫೌಂಡೇಶನ್ ರಿಯಾದ್ ಝೋನ್ ಇದರ 2017- 18 ರ ಸಾಲಿನ ವಾರ್ಷಿಕ ಕೌನ್ಸಿಲ್ ಸಭೆಯು ಇತ್ತೀಚೆಗೆ ಇಲ್ಲಿನ ಅಲ್ ಖಲೀಜ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.


ಝೋನ್ ಅಧ್ಯಕ್ಷ ಹನೀಫ್ ಬೆಳ್ಳಾರೆ ಅಧ್ಯಕ್ಷತೆ ವಹಿಸಿದರು. ಕೆಸಿಎಫ್ ಒಲಯ್ಯ ಸೆಕ್ಟರ್ ಅಧ್ಯಕ್ಷ ಮುಸ್ತಫಾ ಝೈನಿ ಕಂಬಿಬಾಣೆ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯದರ್ಶಿ ಬಶೀರ್ ತಲಪ್ಪಾಡಿ ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು. ಝೋನಲ್ ಪ್ರಕಾಶನ ವಿಭಾಗದ ಅಧ್ಯಕ್ಷ ನಿಝಾಂ ಸಾಗರ್ ಸಂಘಟನೆಯ ಮುಖ ವಾಣಿ “ಗಲ್ಫ್ ಇಶಾರ” ಪತ್ರಿಕೆಗೆ ಸಂಬಂಧಿಸಿದಂತೆ ಅದರ ಅಭಿಯಾನ, ರಿಯಾದ್ ವಲಯದ ಒಂದು ವರ್ಷದ ವಿಸ್ತೃತ ವರದಿಯನ್ನು ಸಭೆಯ ಮುಂದಿರಿಸಿದರು.


ಸಂಘಟನೆ ಕಳೆದ ಒಂದು ವರ್ಷದ ಅವಧಿಯಲ್ಲಿ ನಡೆಸಿದ ವಿವಿಧ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂತ್ವನ ಚಟವಟಿಗಳಿಗೆ ಬೆಳಕು ಚೆಲ್ಲುವ ಹೃಸ್ವ ಸಾಕ್ಷ್ಯ ಚಿತ್ರವೊಂದನ್ನು ಸಭೆಯಲ್ಲಿ ಪ್ರದರ್ಶಿಸಲಾಯಿತು.
ಕಳೆದ ಸಾಲಿನಲ್ಲಿ ಅನೇಕ ಕಾರಣಗಳಿಂದ ಸಂಘಟನೆಯ ವಿವಿಧ ವಿಭಾಗಗಳಲ್ಲಿ ಹುದ್ದೆಗಳನ್ನು ಸಭೆಯಲ್ಲಿ ಭರ್ತಿ ಮಾಡಲಾಗಿದ್ದು ಈ ಸರದಿಯಲ್ಲಿ ಸಾಂತ್ವನ ವಿಭಾಗಕ್ಕೆ ಅಧ್ಯಕ್ಷರಾಗಿ ಹಂಝ ಮೈಂದಾಳ, ಶಿಕ್ಷಣ ವಿಭಾಗದಲ್ಲಿ ಅಧ್ಯಕ್ಷರಾಗಿ ಫಾರೂಕ್ ಸ’ಅದಿ ಹೆಚ್ ಕಲ್ಲು ಹಾಗೂ ರಾಷ್ಟ್ರೀಯ ಸಮಿತಿ ಕೌನ್ಸಿಲ್ ಸದಸ್ಯರಾಗಿ ಉಮ್ಮರ್ ಅಳಕೆಮಜಲು ಆಯ್ಕೆಯಾದರು.


ಇದೇ ವೇಳೆಗೆ ಕಳೆದ ಸಾಲಿನ “ಅಸ್ಸುಫ್ಫಾ” ರಾಷ್ಟ್ರೀಯ ಮಟ್ಟದ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದು ಕೊಂಡ ರಬ್ವಾ ಸೆಕ್ಟರ್ ಸದಸ್ಯ ಅಬ್ದುಲ್ ಹಮೀದ್ ಮಂಜನಾಡಿ, ರಬ್ವಾ ಅಸ್ಸುಫ್ಫಾ ಕೇಂದ್ರದ ಶಿಕ್ಷಕ ಇಸ್ಮಾಯಿಲ್ ಮದನಿ ಒಕ್ಕೆತ್ತೂರು, ಬತ್ತಾ ಕೇಂದ್ರದ ಅಧ್ಯಾಪಕರುಗಳಾದ ಮುಸ್ತಫಾ ಸ’ಅದಿ ಸೂರಿ ಕುಮೇರು, ಫಾರೂಕ್ ಸ’ಅದಿ ಹೆಚ್ ಕಲ್ಲು ಮುಂತಾದವರನ್ನು ಸನ್ಮಾನಿಸಲಾಯಿತು .
ಕೆಸಿಎಫ್ ಸೌದಿ ರಾಷ್ಟ್ರೀಯ ಸಮಿತಿ ಪ್ರತಿನಿಧಿಯಾಗಿ ಆಗಮಿಸಿದ್ದ ಅಲ್ ಖಸೀಂ ಝೋನ್ ಕಾರ್ಯದರ್ಶಿ ಸಾಲಿ ಬೆಳ್ಳಾರೆ, ರಿಯಾದ್ ಝೋನ್ ಸಮಿತಿಯ ಕಳೆದ ಒಂದು ವರ್ಷದ ಕಾರ್ಯ ಚಟುವಟಿಕೆಗಳನ್ನು ಕೊಂಡಾಡಿದ್ದು ಮುಂದಿನ ದಿನಗಳಲ್ಲಿ ಸಂಘಟನೆ ಇನ್ನಷ್ಟು ಎತ್ತರಕ್ಕೆ ಬೆಳೆಯಲು ಕಾರ್ಯಕರ್ತರ ನಿಸ್ವಾರ್ಥ ಶ್ರಮದ ಅಗತ್ಯವಿದೆಯೆಂದು ಹೇಳಿದರು.
ವೇದಿಕೆಯಲ್ಲಿ ಕೆಸಿಎಫ್ ರಾಷ್ಟ್ರೀಯ ಸಮಿತಿ ಉಪಾಧ್ಯಕ್ಷ ನಝೀರ್ ಕಾಷಿಪಟ್ಣ, ಸಾಂತ್ವನ ವಿಭಾಗದ ಅಧ್ಯಕ್ಷ ಸಲೀಂ ಕನ್ಯಾಡಿ, ಕೆಸಿಎಫ್ ರಿಯಾದ್ ಝೋನ್ ಕೋಶಾಧಿಕಾರಿ ಇಸ್ಮಾಯಿಲ್ ಕಣ್ಣಂಗಾರ್, ನೂತನ ಮುರೂಜ್ ಸೆಕ್ಟರ್ ಕೋಶಾಧಿಕಾರಿ ರಝಾಕ್ ಹಾಜಿ ಉಜಿರೆ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಕೆಸಿಎಫ್ ರಾಷ್ಟ್ರೀಯ ಸಮಿತಿ ಸಂಘಟನಾ ವಿಭಾಗದ ಅಧ್ಯಕ್ಷ ಸಿದ್ದೀಕ್ ಸಖಾಫಿ ಪೆರುವಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಶೀದ್ ಮದನಿ ರಂತಡ್ಕ ಖಿರಾ’ಅತ್ ನಡೆಸಿದರು. ರಮೀಝ್ ಕುಳಾಯಿ ಆರಂಭದಲ್ಲಿ ಸ್ವಾಗತಿಸಿ ನವಾಝ್ ಚಿಕ್ಕಮಗಳೂರು ಕೊನೆಯಲ್ಲಿ ವಂದಿಸಿದರು. ಹಸೈನಾರ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ