ಶಿರಿಯ: ಹಲವಾರು ಮೊಹಲ್ಲಾಗಳ ಖಾಝಿಯೂ ಸಮಸ್ತ ಉಪಾಧ್ಯಕ್ಷರೂ ಆಗಿದ್ದ ತಾಜುಶ್ಶರೀಅಃ ಅಲೀಕುಂಞಿ ಉಸ್ತಾದರ ಎರಡನೇ ಉರೂಸ್ ಸಮಾರಂಭವು ಇಂದು (ಮಾರ್ಚ್ 16) ನಡೆಯಲಿದೆ.
ಬೆಳಿಗ್ಗೆ 9ಗಂಟೆಗೆ ನಡೆಯುವ ಮಖಾಂ ಝಿಯಾರತಿಗೆ ಸಯ್ಯಿದ್ ಎಂಎಸ್ ತಂಙಳ್ ಮದನಿ ಮಾಸ್ತಿಕುಂಡ್ ನೇತೃತ್ವ ವಹಿಸುವರು. ಬೆಳಿಗ್ಗೆ 9.15ಕ್ಕೆ ಮುಟ್ಟಂ ಕುಂಞಿಕೋಯ ತಂಙಳ್ ಧ್ವಜಾರೋಹಣಕ್ಕೆ ನೇತೃತ್ವ ನೀಡುವರು. ಸಯ್ಯಿದ್ ಹಾಮಿದ್ ತಂಙಳ್ ಮಂಜೇಶ್ವರಂ ಖತ್ಮುಲ್ ಖುರ್ಆನ್ ಪ್ರಾರಂಭ ನಡೆಸುವರು. ಸಂಜೆ 4 ಗಂಟೆಗೆ ನಡೆಯುವ ದ್ಸಿಕ್ರ್ ಮೌಲಿದ್ ಮಜ್ಲಿಸಿಗೆ ಸಯ್ಯಿದ್ ಕೆಎಸ್ ಅಲಿ ತಂಙಳ್ ಕುಂಬೋಲ್, ಸಯ್ಯಿದ್ ಕೆಎಸ್ ಜಅಫರ್ ಸ್ವಾದಿಕ್ ತಂಙಳ್ ಕುಂಬೋಲ್, ಸಯ್ಯಿದ್ ಅಬ್ದುಲ್ ರಹ್ಮಾನ್ ಶಹೀರ್ ಅಲ್ ಬುಖಾರಿ ಮಳ್ಹರ್ ಮುಂತಾದವರು ನೇತೃತ್ವ ವಹಿಸುವರು.
ರಾತ್ರಿ 7 ಗಂಟೆಗೆ ನಡೆಯುವ ಜಲ್ಸತುಲ್ ಉರೂಸ್ ಕಾರ್ಯಕ್ರಮದಲ್ಲಿ ಸಯ್ಯಿದ್ ಸಾದಾತ್ ತಂಙಳ್ ಗುರುವಾಯನಕೆರೆ ದುಃಆ ನಡೆಸುವರು. ಅಬ್ದುಲ್ ರಹ್ಮಾನ್ ನಿಝಾಮಿ ಶಿರಿಯರವರ ಅಧ್ಯಕ್ಷತೆಯಲ್ಲಿ ಸಯ್ಯಿದ್ ಕೆಎಸ್ ಆಟ್ಟಕ್ಕೋಯ ತಂಙಳ್ ಕುಂಬೋಲ್ ಉದ್ಘಾಟಿಸುವರು. ಶೈಖುನಾ ಮಾಣಿ ಉಸ್ತಾದ್, ಅತಾಉಲ್ಲಾ ತಂಙಳ್ ಉದ್ಯಾವರ, ಮಾಣಿಕ್ಕೋತ್ ಅಬ್ದುಲ್ಲ ಮುಸ್ಲಿಯಾರ್, ಹುಸೈನ್ ಸಅದಿ ಕೆಸಿ ರೋಡ್, ಎಕೆಎಂ ಅಶ್ರಫ್ ಎಂಎಲ್ಎ ಮುಂತಾದವರು ಪ್ರಭಾಷಣೆ ನಡೆಸುವರು. ಡಾ.ಫಾರೂಕ್ ನಈಮಿ ಕೊಲ್ಲಂ ಅನುಸ್ಮರಣ ಭಾಷಣ ನಡೆಸುವರು.
ರಾತ್ರಿ 9 ಗಂಟೆಗೆ ನಡೆಯುವ ಬುರ್ದಾ ಮಜ್ಲಿಸಿಗೆ ತ್ವಾಹ ತಂಙಳ್ ಪೂಕೋಟೂರ್, ಅಬ್ದುಸ್ಸಮದ್ ಅಮಾನಿ ಪಟ್ಟುವಂ, ಹಾಫಿಳ್ ಸ್ವಾದಿಕ್ ಫಾಳಿಲಿ ಮುಂತಾದವರು ನೇತೃತ್ವ ನೀಡುವರು.
ಸಮಾರೋಪ ಸಮಾರಂಭಕ್ಕೆ ಸಯ್ಯಿದ್ ಸುಹೈಲ್ ಅಸ್ಸಖಾಫ್ ಮಡಕ್ಕರ ನೇತೃತ್ವ ವಹಿಸುವರು. 9.30ಕ್ಕೆ ಅನ್ನದಾನದೊಂದಿಗೆ ಸಮಾಪ್ತಿಗೊಳ್ಳಲಿದೆ.
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದವರು:
ಉರೂಸ್ ಸಮಿತಿ ಪದಾಧಿಕಾರಿಗಳಾದ ಶಾಫಿ ಸಅದಿ ಶಿರಿಯ, ಮುಹಮ್ಮದ್ ಸಖಾಫಿ ಕುಳೂರ್, ಡಿಕೆ ಉಮರ್ ಸಖಾಫಿ, ಅನ್ವರ್ ಸಖಾಫಿ ಶಿರಿಯ, ಸಹಲ್ ಸಖಾಫಿ, ನಸೀರ್ ಶಿರಿಯ ಯೂಸುಫ್ ತರವಾಡ್
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಮಕ್ಕತುಲ್ ಮುಕರ್ರಮಃ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ