ಚಿಕ್ಕಮಗಳೂರು :ಈ ಹಿಂದೆ ಬಿಜೆಪಿ ಸರ್ಕಾರ ಮುಸ್ಲಿಮರ 2ಬಿ ಮೀಸಲಾತಿಯನ್ನು ರದ್ದು ಗೊಳಿಸಿ ಜಾರಿಗೊಳಿಸಿದ್ದ ಆದೇಶಕ್ಕೆ ದೇಶದ ಸರ್ವೋಚ್ಚ ನ್ಯಾಯಾಲಯವು ತಡೆ ಆದೇಶ ನೀಡಿರುವುದು ಸ್ವಾಗತಾರ್ಹ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾದ ಅಲ್ ಹಾಜ್ ಮುಹಮ್ಮದ್ ಶಾಹಿದ್ ರಜ್ವಿ ರವರು ತಿಳಿಸಿದ್ದಾರೆ.
ಅದಾಗಿ ಒಂದು ಸಮುದಾಯದ ಹಕ್ಕನ್ನು ಕಸಿದು ಬೇರೊಂದು ಸಮುದಾಯಕ್ಕೆ ನೀಡುವ ಅವೈಜ್ಞಾನಿಕ ಪ್ರಯತ್ನ ಮಾಡಿರುವುದು ಸರಿಯಲ್ಲ ಮುಸ್ಲಿಮರಿಗಿದ್ದ 4% ಮೀಸಲಾತಿಯನ್ನು ರದ್ದು ಗೊಳಿಸಿ ಲಿಂಗಾಯಿತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ 2% ನೀಡಿರುವುದು ರಾಜಕೀಯ ಲಾಭಕ್ಕಾಗಿ ಬಳಸಿರುವುದು ಖಂಡನೀಯ ಆದ್ದರಿಂದ ಲಿಂಗಾಯಿತ ಮತ್ತು ಒಕ್ಕಲಿಗ ಸಮುದಾಯದ ನಾಯಕರು ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದ ರಜ್ವಿ ಮೀಸಲಾತಿಗೆ ಸಂಬಂಧಿಸಿದಂತೆ ದಿನಾಂಕ 9 ನೇ ಮೇ ರಂದು ವಿಚಾರಣೆ ಮುಂದೂಡಲಾಗಿದ್ದು ಭಾರತೀಯ ನ್ಯಾಯಾಂಗ ವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ ಸದರಿ ಪ್ರಕರಣದಲ್ಲಿ ಸಮುದಾಯಕ್ಕೆ ನ್ಯಾಯ ದೊರಕಲಿದೆ ಎಂದು ತಿಳಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಮೇಲೆ ಅಪಾರವಾದ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ತೀರ್ಪು ಹೊರಬೀಳಲಿರುವುದರಿಂದ ನ್ಯಾಯ ಸಿಗುವ ವಿಶ್ವಾಸ ಇದೆ ಹಾಗು ಪ್ರಜಾಪ್ರಭುತ್ವಕ್ಕೆ ವ್ಯವಸ್ಥೆಯಲ್ಲಿ ಅಸಮಾನತೆ ಪರಿಣಾಮ ಬೀರುವ ಸಾಧ್ಯತೆ ಇಲ್ಲವಂತಾಗಿ ಜಯ ಸಿಗಲಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷರಾದ ಅಲ್ ಹಾಜ್ ಫೈರೋಜ್ ಅಹಮದ್ ರಜ್ವಿ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ