ದಿನಾಂಕ 14-04-2023 ಶುಕ್ರವಾರ ಬಹರೈನ್, ಮನಾಮದ ಕನ್ನಡ ಭವನದಲ್ಲಿ ಕೆಸಿಎಫ್ ಬಹರೈನ್ ರಾಷ್ಟ್ರೀಯ ಅಧ್ಯಕ್ಷರಾದ ಜಮಾಲುದ್ದೀನ್ ವಿಟ್ಲರವರ ಅಧ್ಯಕ್ಷತೆಯಲ್ಲಿ ಗ್ರಾಂಡ್ ಇಫ್ತಾರ್ ಸಂಗಮವು ಮನಾಮ ಯಶಸ್ವಿಯಾಗಿ ನಡೆಯಿತು.

ಅಸ್ಸಯ್ಯಿದ್ ಬಾಫಖಿ ತಂಙಲ್ ರವರು ದುಆ ನೆರವೇರಿಸಿದರು. ಕೆ.ಸಿ.ಎಫ್ ಉಲಮಾಗಳ ನೇತೃತ್ವದಲ್ಲಿ ಮೌಲಿದ್ ಮಜ್ಲಿಸ್ ನಡೆಯಿತು.

ಕರ್ನಾಟಕದ ಪ್ರಮುಖ ವಿದ್ವಾಂಸರು, ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಸದಸ್ಯರಾದ ಬಹು. ಜಿ.ಎಂ.ಕಾಮಿಲ್ ಸಖಾಫಿ ಉಸ್ತಾದರು ಮುಖ್ಯ ಪ್ರಭಾಷಣವನ್ನು ನಡೆಸಿ ಅನಿವಾಸಿ ಕನ್ನಡಿಗರ ಹೆಮ್ಮೆಯಾದ ಕೆ.ಸಿ.ಎಫ್ ನ ಕಾರ್ಯ ವೈಖರಿಯನ್ನು ಪ್ರಶಂಸಿದರು. ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಮಹ್ಮೂದ್ ಅಲೀ ಮುಸ್ಲಿಯಾರ್ ಕೊಡಗು, ಪ್ಯಾಲೆಸ್ತೀನ್ ಅಂಬಾಸಿಡರ್ HE. Mr. ಅಬ್ದುಲ್ ಖಾದರ್, ಇಜಾಝ್ ಅಸ್ಲಮ್ ಶೈಖ್ (ಸೆಕೆಂಡ್ ಸೆಕ್ರೆಟರಿ ಇಂಡಿಯನ್ ಎಂಬಸ್ಸಿ), ಮನ್ಸೂರ್ ಹೆಜಮಾಡಿ (ಫೌಂಡರ್ ಹಾಗೂ ಸಿಇಒ ಸಾರಾ ಗ್ರೂಪ್) ರಮೀ ರಶೀದ್, ಸೈಯ್ಯಿದ್ ವಾಜಿದ್, ಖುರ್ಷಿದ್ ಆಲಮ್, ಗಯಾಝುದ್ದೀನ್ ಮೈಸೂರು, ಜಾಫರ್ ಮೊಯ್ದೀನ್, ಶಕೀಲ್ ಅಝಮಿ, ಶಾಫಿ ಪರಕಟ್ಟ, ಮುಹಮ್ಮದ್ ಅಲೀ ಮುಸ್ಲಿಯಾರ್ ವೇಣೂರು, ಮನ್ಸೂರ್ ಬೆಳ್ಮ ರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಸೂಫಿ ಪಯಂಬಚಾಲ್, ಸ್ವಾಗತ ಸಮಿತಿ ಕನ್ವೀನರ್ ಅಶ್ರಫ್ ಕಿನ್ಯ,ಫೈನಾನ್ಸ್ ಕಂಟ್ರೋಲರ್ ಇರ್ಫಾನ್ ಮೇಲ್ಕಾರ್ ಹಾಗೂ ವಿವಿಧ ಸಂಘಟನೆಗಳ ನೇತಾರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ ಸ್ವಾಗತಿಸಿದ ಕಾರ್ಯಕ್ರಮವನ್ನು ಸ್ವಾಗತ ಸಮಿತಿ ಚೇರ್ಮ್ಯಾನ್ ಹಾಗೂ ಅಂತರಾಷ್ಟ್ರೀಯ ಸಮಿತಿ ಕ್ಯಾಬಿನೆಟ್ ಅಂಗ ಬಶೀರ್ ಕಾರ್ಲೆಯವರು ನಿರೂಪಿಸಿ, ಶಿಹಾಬುದ್ದೀನ್ ಪರಪ್ಪ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ