ಜಿದ್ದಾ: ಅಂತರ್ಯುದ್ಧದ ನಂತರ ಸುಡಾನ್ನಲ್ಲಿ ಸಿಲುಕಿರುವ ಸಹಸ್ರಾರು ಭಾರತೀಯರನ್ನು ರಕ್ಷಿಸುವ ಸಲುವಾಗಿ ಭಾರತ ಸರ್ಕಾರ ಜಾರಿಗೆ ತಂದಿರುವ ಆಪರೇಷನ್ ಕಾವೇರಿಯ ಭಾಗವಾಗಿ ಅಬೀರ್ ಮೆಡಿಕಲ್ ಗ್ರೂಪ್ ಎಲ್ಲಾ ರೀತಿಯ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತಿದೆ.
ಮಿಲಿಟರಿ ಬಣಗಳ ನಡುವಿನ ಹೋರಾಟವು ಉಲ್ಬಣಗೊಂಡಂತೆ, ಸುಡಾನ್ನಲ್ಲಿ ಸಿಲುಕಿದ್ದ 3,500 ಕ್ಕೂ ಹೆಚ್ಚು ಭಾರತೀಯರಲ್ಲಿ ಸುಮಾರು 1,300 ಜನರು ಆಪರೇಷನ್ ಕಾವೇರಿಯ ಭಾಗವಾಗಿ ಜಿದ್ದಾದ ಮೂಲಕ ಭಾರತಕ್ಕೆ ಮರಳಿದರು. ಜಿದ್ದಾ ಇಂಡಿಯನ್ ಇಂಟರ್ನ್ಯಾಶನಲ್ ಸ್ಕೂಲ್, ಜಿದ್ದಾಕ್ಕೆ ಹಡಗು ಮತ್ತು ವಿಮಾನದ ಮೂಲಕ ಬರುವ ಪ್ರಯಾಣಿಕರಿಗೆ ತಾತ್ಕಾಲಿಕ ವಿರಾಮ ಸೌಲಭ್ಯಗಳನ್ನು ಹೊಂದಿದೆ. ಇಲ್ಲಿ ಭಾರತೀಯ ಅಧಿಕಾರಿಗಳು ಮತ್ತು ಸ್ವಯಂಸೇವಕರೊಂದಿಗೆ ಅಬೀರ್ ಮೆಡಿಕಲ್ ಗ್ರೂಪ್ನ ಪರಿಣಿತ ವೈದ್ಯಕೀಯ ತಂಡವು ಮೊದಲ ದಿನದಿಂದ ಹಿಂದಿರುಗುವವರಿಗಾಗಿ ವೈದ್ಯಕೀಯ ಸೇವೆಯನ್ನು ಒದಗಿಸುತ್ತಿದೆ.

ಅಬೀರ್ ಮೆಡಿಕಲ್ ಗ್ರೂಪ್ನ ಪರಿಣತ ವೈದ್ಯರಾದ, ಡಾ. ಹಾರೂನ್ ರಶೀದ್, ಡಾ. ಮುಹಮ್ಮದ್ ಖಾಜಾ, ಡಾ. ಅತೀಫ್, ದಾದಿಯರು ಹಾಗೂ ಪ್ಯಾರಾಮೆಡಿಕಲ್ ವೃತ್ತಿಪರರನ್ನು ಒಳಗೊಂಡ 10 ಕ್ಕೂ ಹೆಚ್ಚು ವೃತ್ತಿಪರರ ತಂಡವು, ಆಂಬ್ಯುಲೆನ್ಸ್ ಸೇವೆಯೂ ಸೇರಿದಂತೆ ಆಪರೇಷನ್ ಕಾವೇರಿಯ ಭಾಗವಾಗಿ ಕಾರ್ಯನಿರ್ವಹಿಸುತ್ತಿದೆ.
ಡಾ.ಜಮ್ಶಿತ್ ಅಹಮದ್, ಡಾ.ಅಹ್ಮದ್ ಆಲುಂಗಲ್, ಡಾ.ಇಮ್ರಾನ್, ಸಿದ್ದಿಕ್ ಮತ್ತಿತರರು ಕಾರ್ಯಚಟುವಟಿಕೆಗಳನ್ನು ಸಂಯೋಜಿಸುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ