ಜಿದ್ದಾ: ಅಂತರ್ಯುದ್ಧದ ನಂತರ ಸುಡಾನ್ನಲ್ಲಿ ಸಿಲುಕಿರುವ ಸಹಸ್ರಾರು ಭಾರತೀಯರನ್ನು ರಕ್ಷಿಸುವ ಸಲುವಾಗಿ ಭಾರತ ಸರ್ಕಾರ ಜಾರಿಗೆ ತಂದಿರುವ ಆಪರೇಷನ್ ಕಾವೇರಿಯ ಭಾಗವಾಗಿ ಅಬೀರ್ ಮೆಡಿಕಲ್ ಗ್ರೂಪ್ ಎಲ್ಲಾ ರೀತಿಯ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತಿದೆ.
ಮಿಲಿಟರಿ ಬಣಗಳ ನಡುವಿನ ಹೋರಾಟವು ಉಲ್ಬಣಗೊಂಡಂತೆ, ಸುಡಾನ್ನಲ್ಲಿ ಸಿಲುಕಿದ್ದ 3,500 ಕ್ಕೂ ಹೆಚ್ಚು ಭಾರತೀಯರಲ್ಲಿ ಸುಮಾರು 1,300 ಜನರು ಆಪರೇಷನ್ ಕಾವೇರಿಯ ಭಾಗವಾಗಿ ಜಿದ್ದಾದ ಮೂಲಕ ಭಾರತಕ್ಕೆ ಮರಳಿದರು. ಜಿದ್ದಾ ಇಂಡಿಯನ್ ಇಂಟರ್ನ್ಯಾಶನಲ್ ಸ್ಕೂಲ್, ಜಿದ್ದಾಕ್ಕೆ ಹಡಗು ಮತ್ತು ವಿಮಾನದ ಮೂಲಕ ಬರುವ ಪ್ರಯಾಣಿಕರಿಗೆ ತಾತ್ಕಾಲಿಕ ವಿರಾಮ ಸೌಲಭ್ಯಗಳನ್ನು ಹೊಂದಿದೆ. ಇಲ್ಲಿ ಭಾರತೀಯ ಅಧಿಕಾರಿಗಳು ಮತ್ತು ಸ್ವಯಂಸೇವಕರೊಂದಿಗೆ ಅಬೀರ್ ಮೆಡಿಕಲ್ ಗ್ರೂಪ್ನ ಪರಿಣಿತ ವೈದ್ಯಕೀಯ ತಂಡವು ಮೊದಲ ದಿನದಿಂದ ಹಿಂದಿರುಗುವವರಿಗಾಗಿ ವೈದ್ಯಕೀಯ ಸೇವೆಯನ್ನು ಒದಗಿಸುತ್ತಿದೆ.

ಅಬೀರ್ ಮೆಡಿಕಲ್ ಗ್ರೂಪ್ನ ಪರಿಣತ ವೈದ್ಯರಾದ, ಡಾ. ಹಾರೂನ್ ರಶೀದ್, ಡಾ. ಮುಹಮ್ಮದ್ ಖಾಜಾ, ಡಾ. ಅತೀಫ್, ದಾದಿಯರು ಹಾಗೂ ಪ್ಯಾರಾಮೆಡಿಕಲ್ ವೃತ್ತಿಪರರನ್ನು ಒಳಗೊಂಡ 10 ಕ್ಕೂ ಹೆಚ್ಚು ವೃತ್ತಿಪರರ ತಂಡವು, ಆಂಬ್ಯುಲೆನ್ಸ್ ಸೇವೆಯೂ ಸೇರಿದಂತೆ ಆಪರೇಷನ್ ಕಾವೇರಿಯ ಭಾಗವಾಗಿ ಕಾರ್ಯನಿರ್ವಹಿಸುತ್ತಿದೆ.
ಡಾ.ಜಮ್ಶಿತ್ ಅಹಮದ್, ಡಾ.ಅಹ್ಮದ್ ಆಲುಂಗಲ್, ಡಾ.ಇಮ್ರಾನ್, ಸಿದ್ದಿಕ್ ಮತ್ತಿತರರು ಕಾರ್ಯಚಟುವಟಿಕೆಗಳನ್ನು ಸಂಯೋಜಿಸುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ